ಕಾಳುಮೆಣಸು ಕೃಷಿಯತ್ತ ಲಕ್ಷ್ಯ ಹರಿಸಿದರೆ, ಕೃಷಿಕರಿಗೆ ಯಶಸ್ಸು ಇರುವುದು ಖಚಿತ. ಬೆಲೆ ಇರುವ ಕೃಷಿಯತ್ತ ವಾಲುವ ಬದಲಾಗಿ ಬೆಲೆ ಉಳಿಸಿಕೊಳ್ಳುವ ಕೃಷಿಯತ್ತ ರೈತರು ಆಸಕ್ತರಾಗಬೇಕು ಎಂದು ಐಸಿಎಆರ್ ಅಪ್ಪಂಗಳದ ಹಿರಿಯ ವಿಜ್ಞಾನಿ ಡಾ.ಅಂಕೇ ಗೌಡ ಹೇಳಿದರು.
ಅವರು ಸುಳ್ಯದ ಎಪಿಎಂಸಿ ಸಭಾಭವನದಲ್ಲಿ ತೋಟಗಾರಿಕಾ ಇಲಾಖೆ, ಐಸಿಎಆರ್ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಅಪ್ಪಂಗಳ, ಹಾಗೂ ಸುಳ್ಯ ರೈತ ಉತ್ಪಾದಕ ಕಂಪನಿ ಆಶ್ರಯದಲ್ಲಿ ನಡೆದ ಕಾಳುಮೆಣಸು ಕೃಷಿಯ ನಿರ್ವಹಣೆ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಕಾಳುಮೆಣಸು ಉತ್ಪಾದನೆಯಲ್ಲಿ ಕರ್ನಾಟಕ ಮುಂದುವರಿಯಬೇಕಿದೆ. ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಬಹುಪಾಲು ಕಡೆ ಕಾಳುಮೆಣಸು ಕೃಷಿಯನ್ನು ಮಾಡಲು ಸಾಧ್ಯ ಇದೆ. ಏಕ ಬೆಳೆಯ ಬದಲು ಮಿಶ್ರ ಬೆಳೆಯು ರೈತರನ್ನು ಸುದೃಢಗೊಳಿಸುತ್ತದೆ. ಅದಕ್ಕಾಗಿ ಅಡಿಕೆಯ ಜೊತೆಗೆ ಕಾಳುಮೆಣಸು ಕೃಷಿಯ ಕಡೆಗೂ ಕೃಷಿಕರು ಆಸಕ್ತರಾಗಬೇಕು ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ಸುಳ್ಯ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ವೀರಪ್ಪ ಗೌಡ ಮಾತನಾಡಿ, ಅಡಿಕೆಯ ಜೊತೆಗೆ ಕಾಳುಮೆಣಸು ಕೃಷಿಯನ್ನೂ ರೈತರು ಬೆಳೆಸಬೇಕಿದೆ. ಈ ಮೂಲಕ ಯಶಸ್ವಿ ಕೃಷಿಕರಾಗಲು ಸಾಧ್ಯ ಎಂದರು.
ಸಭೆಯಲ್ಲಿ ಸುಳ್ಯ ತೋಟಗಾರಿಕಾ ಹಿರಿಯ ನಿರ್ದೇಶಕರಾರ ಸುಹಾನ ಪಿ, ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್, ವಿಜ್ಞಾನಿ ಡಾ.ಪೈಜಲ್ ಉಪಸ್ಥಿತರಿದ್ದರು.ಸುಳ್ಯ ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕ ಜಯರಾಮ ಮುಂಡೋಳಿಮೂಲೆ ಸ್ವಾಗತಿಸಿದರು.
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…