Advertisement
ಸುದ್ದಿಗಳು

ಕಾಳುಮೆಣಸು ಕೃಷಿಯತ್ತ ಲಕ್ಷ್ಯ ಇದ್ದರೆ, ಕಾಳುಮೆಣಸು ಬೆಳೆಸಿ ಕೋಟಿ ಗಳಿಸಿ…! |

Share

ಕಾಳುಮೆಣಸು ಕೃಷಿಯತ್ತ ಲಕ್ಷ್ಯ ಹರಿಸಿದರೆ, ಕೃಷಿಕರಿಗೆ ಯಶಸ್ಸು ಇರುವುದು ಖಚಿತ. ಬೆಲೆ ಇರುವ ಕೃಷಿಯತ್ತ ವಾಲುವ ಬದಲಾಗಿ ಬೆಲೆ ಉಳಿಸಿಕೊಳ್ಳುವ ಕೃಷಿಯತ್ತ ರೈತರು ಆಸಕ್ತರಾಗಬೇಕು ಎಂದು  ಐಸಿಎಆರ್ ಅಪ್ಪಂಗಳದ ಹಿರಿಯ ವಿಜ್ಞಾನಿ ಡಾ.ಅಂಕೇ ಗೌಡ ಹೇಳಿದರು.

ಅವರು ಸುಳ್ಯದ ಎಪಿಎಂಸಿ ಸಭಾಭವನದಲ್ಲಿ ತೋಟಗಾರಿಕಾ ಇಲಾಖೆ, ಐಸಿಎಆರ್‌ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಅಪ್ಪಂಗಳ, ಹಾಗೂ ಸುಳ್ಯ ರೈತ ಉತ್ಪಾದಕ ಕಂಪನಿ ಆಶ್ರಯದಲ್ಲಿ ನಡೆದ ಕಾಳುಮೆಣಸು ಕೃಷಿಯ ನಿರ್ವಹಣೆ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಕಾಳುಮೆಣಸು ಉತ್ಪಾದನೆಯಲ್ಲಿ ಕರ್ನಾಟಕ ಮುಂದುವರಿಯಬೇಕಿದೆ. ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಬಹುಪಾಲು ಕಡೆ ಕಾಳುಮೆಣಸು ಕೃಷಿಯನ್ನು ಮಾಡಲು ಸಾಧ್ಯ ಇದೆ. ಏಕ ಬೆಳೆಯ ಬದಲು ಮಿಶ್ರ ಬೆಳೆಯು ರೈತರನ್ನು ಸುದೃಢಗೊಳಿಸುತ್ತದೆ. ಅದಕ್ಕಾಗಿ ಅಡಿಕೆಯ ಜೊತೆಗೆ ಕಾಳುಮೆಣಸು ಕೃಷಿಯ ಕಡೆಗೂ ಕೃಷಿಕರು ಆಸಕ್ತರಾಗಬೇಕು ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ಸುಳ್ಯ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ವೀರಪ್ಪ ಗೌಡ ಮಾತನಾಡಿ, ಅಡಿಕೆಯ ಜೊತೆಗೆ ಕಾಳುಮೆಣಸು ಕೃಷಿಯನ್ನೂ ರೈತರು ಬೆಳೆಸಬೇಕಿದೆ. ಈ ಮೂಲಕ ಯಶಸ್ವಿ ಕೃಷಿಕರಾಗಲು ಸಾಧ್ಯ ಎಂದರು.

ಸಭೆಯಲ್ಲಿ ಸುಳ್ಯ ತೋಟಗಾರಿಕಾ ಹಿರಿಯ ನಿರ್ದೇಶಕರಾರ ಸುಹಾನ ಪಿ, ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್‌, ವಿಜ್ಞಾನಿ ಡಾ.ಪೈಜಲ್‌ ಉಪಸ್ಥಿತರಿದ್ದರು.ಸುಳ್ಯ ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕ ಜಯರಾಮ ಮುಂಡೋಳಿಮೂಲೆ ಸ್ವಾಗತಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

54 minutes ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

5 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

5 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

16 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

16 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

20 hours ago