ಕಾಳುಮೆಣಸು ಕೃಷಿಯತ್ತ ಲಕ್ಷ್ಯ ಹರಿಸಿದರೆ, ಕೃಷಿಕರಿಗೆ ಯಶಸ್ಸು ಇರುವುದು ಖಚಿತ. ಬೆಲೆ ಇರುವ ಕೃಷಿಯತ್ತ ವಾಲುವ ಬದಲಾಗಿ ಬೆಲೆ ಉಳಿಸಿಕೊಳ್ಳುವ ಕೃಷಿಯತ್ತ ರೈತರು ಆಸಕ್ತರಾಗಬೇಕು ಎಂದು ಐಸಿಎಆರ್ ಅಪ್ಪಂಗಳದ ಹಿರಿಯ ವಿಜ್ಞಾನಿ ಡಾ.ಅಂಕೇ ಗೌಡ ಹೇಳಿದರು.
ಅವರು ಸುಳ್ಯದ ಎಪಿಎಂಸಿ ಸಭಾಭವನದಲ್ಲಿ ತೋಟಗಾರಿಕಾ ಇಲಾಖೆ, ಐಸಿಎಆರ್ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಅಪ್ಪಂಗಳ, ಹಾಗೂ ಸುಳ್ಯ ರೈತ ಉತ್ಪಾದಕ ಕಂಪನಿ ಆಶ್ರಯದಲ್ಲಿ ನಡೆದ ಕಾಳುಮೆಣಸು ಕೃಷಿಯ ನಿರ್ವಹಣೆ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಕಾಳುಮೆಣಸು ಉತ್ಪಾದನೆಯಲ್ಲಿ ಕರ್ನಾಟಕ ಮುಂದುವರಿಯಬೇಕಿದೆ. ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಬಹುಪಾಲು ಕಡೆ ಕಾಳುಮೆಣಸು ಕೃಷಿಯನ್ನು ಮಾಡಲು ಸಾಧ್ಯ ಇದೆ. ಏಕ ಬೆಳೆಯ ಬದಲು ಮಿಶ್ರ ಬೆಳೆಯು ರೈತರನ್ನು ಸುದೃಢಗೊಳಿಸುತ್ತದೆ. ಅದಕ್ಕಾಗಿ ಅಡಿಕೆಯ ಜೊತೆಗೆ ಕಾಳುಮೆಣಸು ಕೃಷಿಯ ಕಡೆಗೂ ಕೃಷಿಕರು ಆಸಕ್ತರಾಗಬೇಕು ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ಸುಳ್ಯ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ವೀರಪ್ಪ ಗೌಡ ಮಾತನಾಡಿ, ಅಡಿಕೆಯ ಜೊತೆಗೆ ಕಾಳುಮೆಣಸು ಕೃಷಿಯನ್ನೂ ರೈತರು ಬೆಳೆಸಬೇಕಿದೆ. ಈ ಮೂಲಕ ಯಶಸ್ವಿ ಕೃಷಿಕರಾಗಲು ಸಾಧ್ಯ ಎಂದರು.
ಸಭೆಯಲ್ಲಿ ಸುಳ್ಯ ತೋಟಗಾರಿಕಾ ಹಿರಿಯ ನಿರ್ದೇಶಕರಾರ ಸುಹಾನ ಪಿ, ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್, ವಿಜ್ಞಾನಿ ಡಾ.ಪೈಜಲ್ ಉಪಸ್ಥಿತರಿದ್ದರು.ಸುಳ್ಯ ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕ ಜಯರಾಮ ಮುಂಡೋಳಿಮೂಲೆ ಸ್ವಾಗತಿಸಿದರು.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…