ಕಾಳುಮೆಣಸು ಕೃಷಿಯತ್ತ ಲಕ್ಷ್ಯ ಹರಿಸಿದರೆ, ಕೃಷಿಕರಿಗೆ ಯಶಸ್ಸು ಇರುವುದು ಖಚಿತ. ಬೆಲೆ ಇರುವ ಕೃಷಿಯತ್ತ ವಾಲುವ ಬದಲಾಗಿ ಬೆಲೆ ಉಳಿಸಿಕೊಳ್ಳುವ ಕೃಷಿಯತ್ತ ರೈತರು ಆಸಕ್ತರಾಗಬೇಕು ಎಂದು ಐಸಿಎಆರ್ ಅಪ್ಪಂಗಳದ ಹಿರಿಯ ವಿಜ್ಞಾನಿ ಡಾ.ಅಂಕೇ ಗೌಡ ಹೇಳಿದರು.
ಅವರು ಸುಳ್ಯದ ಎಪಿಎಂಸಿ ಸಭಾಭವನದಲ್ಲಿ ತೋಟಗಾರಿಕಾ ಇಲಾಖೆ, ಐಸಿಎಆರ್ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಅಪ್ಪಂಗಳ, ಹಾಗೂ ಸುಳ್ಯ ರೈತ ಉತ್ಪಾದಕ ಕಂಪನಿ ಆಶ್ರಯದಲ್ಲಿ ನಡೆದ ಕಾಳುಮೆಣಸು ಕೃಷಿಯ ನಿರ್ವಹಣೆ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಕಾಳುಮೆಣಸು ಉತ್ಪಾದನೆಯಲ್ಲಿ ಕರ್ನಾಟಕ ಮುಂದುವರಿಯಬೇಕಿದೆ. ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಬಹುಪಾಲು ಕಡೆ ಕಾಳುಮೆಣಸು ಕೃಷಿಯನ್ನು ಮಾಡಲು ಸಾಧ್ಯ ಇದೆ. ಏಕ ಬೆಳೆಯ ಬದಲು ಮಿಶ್ರ ಬೆಳೆಯು ರೈತರನ್ನು ಸುದೃಢಗೊಳಿಸುತ್ತದೆ. ಅದಕ್ಕಾಗಿ ಅಡಿಕೆಯ ಜೊತೆಗೆ ಕಾಳುಮೆಣಸು ಕೃಷಿಯ ಕಡೆಗೂ ಕೃಷಿಕರು ಆಸಕ್ತರಾಗಬೇಕು ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ಸುಳ್ಯ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ವೀರಪ್ಪ ಗೌಡ ಮಾತನಾಡಿ, ಅಡಿಕೆಯ ಜೊತೆಗೆ ಕಾಳುಮೆಣಸು ಕೃಷಿಯನ್ನೂ ರೈತರು ಬೆಳೆಸಬೇಕಿದೆ. ಈ ಮೂಲಕ ಯಶಸ್ವಿ ಕೃಷಿಕರಾಗಲು ಸಾಧ್ಯ ಎಂದರು.
ಸಭೆಯಲ್ಲಿ ಸುಳ್ಯ ತೋಟಗಾರಿಕಾ ಹಿರಿಯ ನಿರ್ದೇಶಕರಾರ ಸುಹಾನ ಪಿ, ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್, ವಿಜ್ಞಾನಿ ಡಾ.ಪೈಜಲ್ ಉಪಸ್ಥಿತರಿದ್ದರು.ಸುಳ್ಯ ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕ ಜಯರಾಮ ಮುಂಡೋಳಿಮೂಲೆ ಸ್ವಾಗತಿಸಿದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…