ಕಾಳುಮೆಣಸು ಕೃಷಿಯತ್ತ ಲಕ್ಷ್ಯ ಹರಿಸಿದರೆ, ಕೃಷಿಕರಿಗೆ ಯಶಸ್ಸು ಇರುವುದು ಖಚಿತ. ಬೆಲೆ ಇರುವ ಕೃಷಿಯತ್ತ ವಾಲುವ ಬದಲಾಗಿ ಬೆಲೆ ಉಳಿಸಿಕೊಳ್ಳುವ ಕೃಷಿಯತ್ತ ರೈತರು ಆಸಕ್ತರಾಗಬೇಕು ಎಂದು ಐಸಿಎಆರ್ ಅಪ್ಪಂಗಳದ ಹಿರಿಯ ವಿಜ್ಞಾನಿ ಡಾ.ಅಂಕೇ ಗೌಡ ಹೇಳಿದರು.
ಅವರು ಸುಳ್ಯದ ಎಪಿಎಂಸಿ ಸಭಾಭವನದಲ್ಲಿ ತೋಟಗಾರಿಕಾ ಇಲಾಖೆ, ಐಸಿಎಆರ್ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಅಪ್ಪಂಗಳ, ಹಾಗೂ ಸುಳ್ಯ ರೈತ ಉತ್ಪಾದಕ ಕಂಪನಿ ಆಶ್ರಯದಲ್ಲಿ ನಡೆದ ಕಾಳುಮೆಣಸು ಕೃಷಿಯ ನಿರ್ವಹಣೆ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಕಾಳುಮೆಣಸು ಉತ್ಪಾದನೆಯಲ್ಲಿ ಕರ್ನಾಟಕ ಮುಂದುವರಿಯಬೇಕಿದೆ. ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಬಹುಪಾಲು ಕಡೆ ಕಾಳುಮೆಣಸು ಕೃಷಿಯನ್ನು ಮಾಡಲು ಸಾಧ್ಯ ಇದೆ. ಏಕ ಬೆಳೆಯ ಬದಲು ಮಿಶ್ರ ಬೆಳೆಯು ರೈತರನ್ನು ಸುದೃಢಗೊಳಿಸುತ್ತದೆ. ಅದಕ್ಕಾಗಿ ಅಡಿಕೆಯ ಜೊತೆಗೆ ಕಾಳುಮೆಣಸು ಕೃಷಿಯ ಕಡೆಗೂ ಕೃಷಿಕರು ಆಸಕ್ತರಾಗಬೇಕು ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ಸುಳ್ಯ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ವೀರಪ್ಪ ಗೌಡ ಮಾತನಾಡಿ, ಅಡಿಕೆಯ ಜೊತೆಗೆ ಕಾಳುಮೆಣಸು ಕೃಷಿಯನ್ನೂ ರೈತರು ಬೆಳೆಸಬೇಕಿದೆ. ಈ ಮೂಲಕ ಯಶಸ್ವಿ ಕೃಷಿಕರಾಗಲು ಸಾಧ್ಯ ಎಂದರು.
ಸಭೆಯಲ್ಲಿ ಸುಳ್ಯ ತೋಟಗಾರಿಕಾ ಹಿರಿಯ ನಿರ್ದೇಶಕರಾರ ಸುಹಾನ ಪಿ, ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್, ವಿಜ್ಞಾನಿ ಡಾ.ಪೈಜಲ್ ಉಪಸ್ಥಿತರಿದ್ದರು.ಸುಳ್ಯ ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕ ಜಯರಾಮ ಮುಂಡೋಳಿಮೂಲೆ ಸ್ವಾಗತಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…