ಕಡಬ ತಾಲೂಕು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜದಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಆರಂಭಿಸಬೇಕು ಹಾಗೂ ತಾಲೂಕಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಆರಂಭಿಸಬೇಕು ಎಂದು ನಾಲ್ಕೂರು ಗ್ರಾಮದ ವಿದ್ಯಾರ್ಥಿನಿ ಭೂಮಿಕಾ ಕುಕ್ಕುಜೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮನವಿ ಮಾಡಿದ್ದಾರೆ.
ಗುತ್ತಿಗಾರು ಗ್ರಾಮದ ಕಮಿಲದ ಬಿಜೆಪಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ವಿದ್ಯಾರ್ಥಿನಿ ಮನವಿ ನೀಡಿದ್ದಾರೆ. ಸುಳ್ಯ ತಾಲೂಕಿಗೆ ಸಂಬಂಧಿಸಿದಂತೆ ಯಾವುದೇ ಮೊರಾರ್ಜಿ ಶಾಲೆಯನ್ನು ಆರಂಭಿಸಲು ಪದವಿ ಪೂರ್ವ ಶಿಕ್ಷಣವನ್ನು ಗ್ರಾಮೀಣ ವಿದ್ಯಾರ್ಥಿಗಳಗೆ ಅನುಕೂಲವಾಗುವಂತೆ ಮಾಡಿಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಜಿಲ್ಲೆಯಲ್ಲಿ 11 ವಸತಿ ಶಾಲೆಗಳಿದ್ದು ಉತ್ತಮ ರೀತಿಯಲ್ಲಿ ಶಿಕ್ಷಣ ನೀಡಲಾಗುತ್ತಿವೆ, ಹೀಗಾಗಿ ಸುಳ್ಯ ತಾಲೂಕಿನಲ್ಲೂ ಶಿಕ್ಷಣ ಸಿಗುವಂತಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭ ವಿದ್ಯಾರ್ಥಿನಿಯ ತಂದೆ ಗಂಗಾಧರ ಕುಕ್ಕುಜೆ, ಬಿಜಿಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಗುತ್ತಿಗಾರು ಗ್ರಾಪಂ ಮಾಜಿ ಅಧ್ಯಕ್ಷ ಅಚ್ಚುತ ಗುತ್ತಿಗಾರು ಮೊದಲಾದವರು ಉಪಸ್ಥಿತರಿದ್ದರು.
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490