ಕಡಬ ತಾಲೂಕು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜದಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಆರಂಭಿಸಬೇಕು ಹಾಗೂ ತಾಲೂಕಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಆರಂಭಿಸಬೇಕು ಎಂದು ನಾಲ್ಕೂರು ಗ್ರಾಮದ ವಿದ್ಯಾರ್ಥಿನಿ ಭೂಮಿಕಾ ಕುಕ್ಕುಜೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮನವಿ ಮಾಡಿದ್ದಾರೆ.
ಗುತ್ತಿಗಾರು ಗ್ರಾಮದ ಕಮಿಲದ ಬಿಜೆಪಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ವಿದ್ಯಾರ್ಥಿನಿ ಮನವಿ ನೀಡಿದ್ದಾರೆ. ಸುಳ್ಯ ತಾಲೂಕಿಗೆ ಸಂಬಂಧಿಸಿದಂತೆ ಯಾವುದೇ ಮೊರಾರ್ಜಿ ಶಾಲೆಯನ್ನು ಆರಂಭಿಸಲು ಪದವಿ ಪೂರ್ವ ಶಿಕ್ಷಣವನ್ನು ಗ್ರಾಮೀಣ ವಿದ್ಯಾರ್ಥಿಗಳಗೆ ಅನುಕೂಲವಾಗುವಂತೆ ಮಾಡಿಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಜಿಲ್ಲೆಯಲ್ಲಿ 11 ವಸತಿ ಶಾಲೆಗಳಿದ್ದು ಉತ್ತಮ ರೀತಿಯಲ್ಲಿ ಶಿಕ್ಷಣ ನೀಡಲಾಗುತ್ತಿವೆ, ಹೀಗಾಗಿ ಸುಳ್ಯ ತಾಲೂಕಿನಲ್ಲೂ ಶಿಕ್ಷಣ ಸಿಗುವಂತಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭ ವಿದ್ಯಾರ್ಥಿನಿಯ ತಂದೆ ಗಂಗಾಧರ ಕುಕ್ಕುಜೆ, ಬಿಜಿಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಗುತ್ತಿಗಾರು ಗ್ರಾಪಂ ಮಾಜಿ ಅಧ್ಯಕ್ಷ ಅಚ್ಚುತ ಗುತ್ತಿಗಾರು ಮೊದಲಾದವರು ಉಪಸ್ಥಿತರಿದ್ದರು.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…