ಕಡಬ ತಾಲೂಕು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜದಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಆರಂಭಿಸಬೇಕು ಹಾಗೂ ತಾಲೂಕಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಆರಂಭಿಸಬೇಕು ಎಂದು ನಾಲ್ಕೂರು ಗ್ರಾಮದ ವಿದ್ಯಾರ್ಥಿನಿ ಭೂಮಿಕಾ ಕುಕ್ಕುಜೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮನವಿ ಮಾಡಿದ್ದಾರೆ.
ಗುತ್ತಿಗಾರು ಗ್ರಾಮದ ಕಮಿಲದ ಬಿಜೆಪಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ವಿದ್ಯಾರ್ಥಿನಿ ಮನವಿ ನೀಡಿದ್ದಾರೆ. ಸುಳ್ಯ ತಾಲೂಕಿಗೆ ಸಂಬಂಧಿಸಿದಂತೆ ಯಾವುದೇ ಮೊರಾರ್ಜಿ ಶಾಲೆಯನ್ನು ಆರಂಭಿಸಲು ಪದವಿ ಪೂರ್ವ ಶಿಕ್ಷಣವನ್ನು ಗ್ರಾಮೀಣ ವಿದ್ಯಾರ್ಥಿಗಳಗೆ ಅನುಕೂಲವಾಗುವಂತೆ ಮಾಡಿಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಜಿಲ್ಲೆಯಲ್ಲಿ 11 ವಸತಿ ಶಾಲೆಗಳಿದ್ದು ಉತ್ತಮ ರೀತಿಯಲ್ಲಿ ಶಿಕ್ಷಣ ನೀಡಲಾಗುತ್ತಿವೆ, ಹೀಗಾಗಿ ಸುಳ್ಯ ತಾಲೂಕಿನಲ್ಲೂ ಶಿಕ್ಷಣ ಸಿಗುವಂತಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭ ವಿದ್ಯಾರ್ಥಿನಿಯ ತಂದೆ ಗಂಗಾಧರ ಕುಕ್ಕುಜೆ, ಬಿಜಿಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಗುತ್ತಿಗಾರು ಗ್ರಾಪಂ ಮಾಜಿ ಅಧ್ಯಕ್ಷ ಅಚ್ಚುತ ಗುತ್ತಿಗಾರು ಮೊದಲಾದವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…