ಕಡಬ ತಾಲೂಕು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜದಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಆರಂಭಿಸಬೇಕು ಹಾಗೂ ತಾಲೂಕಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಆರಂಭಿಸಬೇಕು ಎಂದು ನಾಲ್ಕೂರು ಗ್ರಾಮದ ವಿದ್ಯಾರ್ಥಿನಿ ಭೂಮಿಕಾ ಕುಕ್ಕುಜೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮನವಿ ಮಾಡಿದ್ದಾರೆ.
ಗುತ್ತಿಗಾರು ಗ್ರಾಮದ ಕಮಿಲದ ಬಿಜೆಪಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ವಿದ್ಯಾರ್ಥಿನಿ ಮನವಿ ನೀಡಿದ್ದಾರೆ. ಸುಳ್ಯ ತಾಲೂಕಿಗೆ ಸಂಬಂಧಿಸಿದಂತೆ ಯಾವುದೇ ಮೊರಾರ್ಜಿ ಶಾಲೆಯನ್ನು ಆರಂಭಿಸಲು ಪದವಿ ಪೂರ್ವ ಶಿಕ್ಷಣವನ್ನು ಗ್ರಾಮೀಣ ವಿದ್ಯಾರ್ಥಿಗಳಗೆ ಅನುಕೂಲವಾಗುವಂತೆ ಮಾಡಿಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಜಿಲ್ಲೆಯಲ್ಲಿ 11 ವಸತಿ ಶಾಲೆಗಳಿದ್ದು ಉತ್ತಮ ರೀತಿಯಲ್ಲಿ ಶಿಕ್ಷಣ ನೀಡಲಾಗುತ್ತಿವೆ, ಹೀಗಾಗಿ ಸುಳ್ಯ ತಾಲೂಕಿನಲ್ಲೂ ಶಿಕ್ಷಣ ಸಿಗುವಂತಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭ ವಿದ್ಯಾರ್ಥಿನಿಯ ತಂದೆ ಗಂಗಾಧರ ಕುಕ್ಕುಜೆ, ಬಿಜಿಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಗುತ್ತಿಗಾರು ಗ್ರಾಪಂ ಮಾಜಿ ಅಧ್ಯಕ್ಷ ಅಚ್ಚುತ ಗುತ್ತಿಗಾರು ಮೊದಲಾದವರು ಉಪಸ್ಥಿತರಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…