ಕಡಬ ತಾಲೂಕು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜದಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಆರಂಭಿಸಬೇಕು ಹಾಗೂ ತಾಲೂಕಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಆರಂಭಿಸಬೇಕು ಎಂದು ನಾಲ್ಕೂರು ಗ್ರಾಮದ ವಿದ್ಯಾರ್ಥಿನಿ ಭೂಮಿಕಾ ಕುಕ್ಕುಜೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮನವಿ ಮಾಡಿದ್ದಾರೆ.
ಗುತ್ತಿಗಾರು ಗ್ರಾಮದ ಕಮಿಲದ ಬಿಜೆಪಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ವಿದ್ಯಾರ್ಥಿನಿ ಮನವಿ ನೀಡಿದ್ದಾರೆ. ಸುಳ್ಯ ತಾಲೂಕಿಗೆ ಸಂಬಂಧಿಸಿದಂತೆ ಯಾವುದೇ ಮೊರಾರ್ಜಿ ಶಾಲೆಯನ್ನು ಆರಂಭಿಸಲು ಪದವಿ ಪೂರ್ವ ಶಿಕ್ಷಣವನ್ನು ಗ್ರಾಮೀಣ ವಿದ್ಯಾರ್ಥಿಗಳಗೆ ಅನುಕೂಲವಾಗುವಂತೆ ಮಾಡಿಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಜಿಲ್ಲೆಯಲ್ಲಿ 11 ವಸತಿ ಶಾಲೆಗಳಿದ್ದು ಉತ್ತಮ ರೀತಿಯಲ್ಲಿ ಶಿಕ್ಷಣ ನೀಡಲಾಗುತ್ತಿವೆ, ಹೀಗಾಗಿ ಸುಳ್ಯ ತಾಲೂಕಿನಲ್ಲೂ ಶಿಕ್ಷಣ ಸಿಗುವಂತಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭ ವಿದ್ಯಾರ್ಥಿನಿಯ ತಂದೆ ಗಂಗಾಧರ ಕುಕ್ಕುಜೆ, ಬಿಜಿಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಗುತ್ತಿಗಾರು ಗ್ರಾಪಂ ಮಾಜಿ ಅಧ್ಯಕ್ಷ ಅಚ್ಚುತ ಗುತ್ತಿಗಾರು ಮೊದಲಾದವರು ಉಪಸ್ಥಿತರಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…