ರಾಜ್ಯ ರಾಜಧಾನಿಯಲ್ಲಿ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ | ಶೇ.60 ಕನ್ನಡ ಕಡ್ಡಾಯಗೊಳಿಸಿ ನೀಡಿದ್ದ ಗಡುವು 2 ವಾರ ವಿಸ್ತರಣೆ

February 29, 2024
12:07 PM

ಬೆಂಗಳೂರು(Bengaluru) ನಮ್ಮ ರಾಜಧಾನಿ(Capital). ಆದರೆ ಅಲ್ಲೆ ಕನ್ನಡ ಮಾತು(Kannada Language), ವ್ಯವಹಾರ, ಅಂಗಡಿ ಬೋರ್ಡ್‌ಗಳ(Board) ಅಳವಡಿಕೆ ಇಲ್ಲ. ರಾಜ್ಯದಲ್ಲಿ ಕನ್ನಡ ಕಡ್ಡಾಯವಾಗಬೇಕು..ಅದರಲ್ಲೂ ಬೆಂಗಳೂರಿನಲ್ಲಿ ಕನ್ನಡವನ್ನು ಉಳಿಸುವ ಯೋಜನೆಯಾಗಬೇಕು ಎಂದು ಕನ್ನಡಪರ ಸಂಘಟನೆಗಳು, ಹೋರಾಟಗಾರರು ಧ್ವನಿ ಎತ್ತುತ್ತಲೇ ಇದ್ದಾರೆ. ಇದೀಗ ರಾಜ್ಯ ಸರ್ಕಾರ ಬೆಂಗಳೂರು ನಗರಾದ್ಯಂತ ಎಲ್ಲಾ ಅಂಗಡಿ ಮುಂಗಟ್ಟುಗಳು(Shop), ವಾಣಿಜ್ಯ ಮಳಿಗೆಗಳು(Commercial Complex) ಮೊದಲಾದ ಕಡೆ ಶೇ.60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಬೇಕೆಂದು ಆದೇಶ ಮಾಡಿತ್ತು. ಈಗ ನಗರದ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ (Kannada Bord) ಅಳವಡಿಕೆಗೆ ನಿಗದಿ ಪಡಿಸಿದ್ದ ಗಡುವನ್ನು ವಿಸ್ತರಿಸಲಾಗಿದೆ.

ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar), ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 3 ಸಾವಿರ ಉದ್ದಿಮೆದಾರರು ಮಾತ್ರ 60% ನಿಯಮ ಪಾಲಿಸಬೇಕಿದೆ. ಬೆಂಗಳೂರಿನಲ್ಲಿ 55,178 ಉದ್ದಿಮೆದಾರರಿಗೆ ನೋಟಿಸ್ ನೀಡಲಾಗಿದೆ. 60% ಕನ್ನಡ ನಿಯಮ ಉಲ್ಲಂಘನೆ ಮಾಡಿರುವ 55,178 ಉದ್ದಿಮೆದಾರರಿಗೆ ನೋಟಿಸ್ ಹೋಗಿದೆ. ನೋಟಿಸ್ ನೀಡಿದ ಬಳಿಕ ಈ ಉದ್ದಿಮೆದಾರರು 60% ಕನ್ನಡ ನಾಮಫಲಕ ಅಳವಡಿಸಿದ್ದಾರೆ. ನೋಟಿಸ್ ನೀಡಿದ ಬಳಿಕವೂ 60% ನಿಯಮ ಅನುಸರಿಸದ 3,044 ಉದ್ದಿಮೆದಾರರು ಇದ್ದಾರೆ. ಅವರ ವಿರುದ್ಧ ಸರ್ಕಾರ ಶಿಸ್ತುಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದೆ.

Considering that it takes time to change the signage, Karnataka Govt has decided to extend the deadline given to commercial establishments by 2 more weeks so that the 60% signage in Kannada rule can be followed. It is important that we uphold our mother tongue in utmost respect, therefore we expect this law will be duly followed, and we shall see compliance to it by the end of the 2 week extended period.

– ಅಂತರ್ಜಾಲ ಮಾಹಿತಿ

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ
ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror