Advertisement
MIRROR FOCUS

ಸಂಸ್ಕರಿಸಿದ ಆಹಾರದ ಕವರ್‌ನಲ್ಲಿ ಉಪ್ಪು ಮತ್ತು ಸಕ್ಕರೆ ಮಾಹಿತಿ ಕಡ್ಡಾಯ | ದಪ್ಪ ಅಕ್ಷರದಲ್ಲಿ ನಮೂದಿಸುವಂತೆ FSSAI ಅಧಿಸೂಚನೆ

Share

ಪ್ಯಾಕಿಂಗ್‌(Packed) ಮಾಡಿದ ಆಹಾರ ಪದಾರ್ಥಗಳಲ್ಲಿ(Food Items) ಇರುವ ಪೋಷಕಾಂಶಗಳ(Nutrition) ಪ್ರಮಾಣ ಕುರಿತ ಮಾಹಿತಿಯನ್ನು ದಪ್ಪ ಅಕ್ಷರಗಳಲ್ಲಿ ಮುದ್ರಿಸುವುದಕ್ಕೆ ಸಂಬಂಧಿಸಿದಂತೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ಕರಡು ಅಧಿಸೂಚನೆ ಪ್ರಕಟಿಸಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳು 2020ಕ್ಕೆ ತಿದ್ದುಪಡಿ ತರುವ ನಿರ್ಧಾರವನ್ನು ಪ್ರಾಧಿಕಾರದ 44ನೇ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಗ್ರಾಹಕರು ಸೇವಿಸುವ ಆಹಾರದಲ್ಲಿನ ಪೌಷ್ಠಿಕಾಂಶದ ಮೌಲ್ಯವನ್ನು ಅರ್ಥಮಾಡಿಕೊಳ್ಳಲು ಹಾಗೂ ಆರೋಗ್ಯಕರ ನಿರ್ಧಾರಗಳನ್ನು ಕೈಗೊಳ್ಳಲು ನೆರವು ನೀಡುವ ಉದ್ದೇಶ ಇದು ಹೊಂದಿದೆ ಎಂದು ಸಚಿವಾಲಯ ಹೇಳಿದೆ.ಪ್ಯಾಕ್ ಮಾಡಿದಲಹಾರ ಪದಾರ್ಥಗಳ ಹೆಚ್ಚಿನ ಸೇವನೆಯು ಹಲವು ರೋಗಗಳಿಗೆ ಕಾರಣವಾಗುತ್ತಿರುವುದರಿಂದ ಇಂತಹ ಆಹಾರ ಪದಾರ್ಥಗಳ ಸೇವನೆ ನಿಯಂತ್ರಿಸಬೇಕೆಂಬುದು ಪೌಷ್ಠಿಕಾಂಶ ತಜ್ಞರ ಅಭಿಪ್ರಾಯವಾಗಿದೆ. ಹೀಗಾಗಿ ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸಲು ಹೊಸ ನಿಯಮ ಪೂರಕವಾಗಲಿದೆ ಎಂದು ಹೇಳಿದೆ.

ಗ್ರಾಹಕರು ತಾವು ಬಳಸುವ ಆಹಾರದ ಪೊಟ್ಟಣಗಳಲ್ಲಿ ಇರುವ ಪೋಷಕಾಂಶಗಳ ಮೌಲ್ಯದ ಬಗ್ಗೆ ತಿಳಿದುಕೊಳ್ಳಬೇಕು. ಈ ಪದಾರ್ಥಗಳು ಆರೋಗ್ಯಕರವಾಗಿವೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳುವ ಅಗತ್ಯವಿದೆ. ಇದಕ್ಕೆ ನೆರವಾಗಲು ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದೆ. ತಿದ್ದುಪಡಿಯ ಕರಡು ಅಧಿಸೂಚನೆಯನ್ನು ಈಗ ಸಲಹೆಗಳು ಮತ್ತು ಲಕ್ಷೇಪಣೆಗಳಿಗಾಗಿ ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸಲಾಗುತ್ತದೆ. ಪ್ಯಾಕೇಜ್ ಮಾಡಿದ ಆಹಾರ ಕಂಪನಿಗಳು ಶಿಫಾರಸು ಮಾಡಲಾದ ಆಹಾರದ ಪೊಟ್ಟಣಗಳಿಗೆ ಸಂಬಂಧಿಸಿದಂತೆ ಒಟ್ಟು ಸಕ್ಕರೆ, ಒಟ್ಟು ಸ್ಯಾಚುರೇಟೆಡ್‌ ಕೊಬ್ಬು ಮತ್ತು ಸೋಡಿಯಂ ಪ್ರಮಾಣದ ಮಾಹಿತಿಯನ್ನು ದಪ್ಪ ಅಕ್ಷರಗಳಲ್ಲಿ ಮಾಹಿತಿಯನ್ನು ನೀಡಬೇಕಾಗುತ್ತದೆ ಎಂದು ಹೇಳಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

51 minutes ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

2 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

14 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

15 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

15 hours ago