Advertisement
MIRROR FOCUS

ಸಂಸ್ಕರಿಸಿದ ಆಹಾರದ ಕವರ್‌ನಲ್ಲಿ ಉಪ್ಪು ಮತ್ತು ಸಕ್ಕರೆ ಮಾಹಿತಿ ಕಡ್ಡಾಯ | ದಪ್ಪ ಅಕ್ಷರದಲ್ಲಿ ನಮೂದಿಸುವಂತೆ FSSAI ಅಧಿಸೂಚನೆ

Share

ಪ್ಯಾಕಿಂಗ್‌(Packed) ಮಾಡಿದ ಆಹಾರ ಪದಾರ್ಥಗಳಲ್ಲಿ(Food Items) ಇರುವ ಪೋಷಕಾಂಶಗಳ(Nutrition) ಪ್ರಮಾಣ ಕುರಿತ ಮಾಹಿತಿಯನ್ನು ದಪ್ಪ ಅಕ್ಷರಗಳಲ್ಲಿ ಮುದ್ರಿಸುವುದಕ್ಕೆ ಸಂಬಂಧಿಸಿದಂತೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ಕರಡು ಅಧಿಸೂಚನೆ ಪ್ರಕಟಿಸಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳು 2020ಕ್ಕೆ ತಿದ್ದುಪಡಿ ತರುವ ನಿರ್ಧಾರವನ್ನು ಪ್ರಾಧಿಕಾರದ 44ನೇ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

Advertisement
Advertisement

ಗ್ರಾಹಕರು ಸೇವಿಸುವ ಆಹಾರದಲ್ಲಿನ ಪೌಷ್ಠಿಕಾಂಶದ ಮೌಲ್ಯವನ್ನು ಅರ್ಥಮಾಡಿಕೊಳ್ಳಲು ಹಾಗೂ ಆರೋಗ್ಯಕರ ನಿರ್ಧಾರಗಳನ್ನು ಕೈಗೊಳ್ಳಲು ನೆರವು ನೀಡುವ ಉದ್ದೇಶ ಇದು ಹೊಂದಿದೆ ಎಂದು ಸಚಿವಾಲಯ ಹೇಳಿದೆ.ಪ್ಯಾಕ್ ಮಾಡಿದಲಹಾರ ಪದಾರ್ಥಗಳ ಹೆಚ್ಚಿನ ಸೇವನೆಯು ಹಲವು ರೋಗಗಳಿಗೆ ಕಾರಣವಾಗುತ್ತಿರುವುದರಿಂದ ಇಂತಹ ಆಹಾರ ಪದಾರ್ಥಗಳ ಸೇವನೆ ನಿಯಂತ್ರಿಸಬೇಕೆಂಬುದು ಪೌಷ್ಠಿಕಾಂಶ ತಜ್ಞರ ಅಭಿಪ್ರಾಯವಾಗಿದೆ. ಹೀಗಾಗಿ ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸಲು ಹೊಸ ನಿಯಮ ಪೂರಕವಾಗಲಿದೆ ಎಂದು ಹೇಳಿದೆ.

Advertisement

ಗ್ರಾಹಕರು ತಾವು ಬಳಸುವ ಆಹಾರದ ಪೊಟ್ಟಣಗಳಲ್ಲಿ ಇರುವ ಪೋಷಕಾಂಶಗಳ ಮೌಲ್ಯದ ಬಗ್ಗೆ ತಿಳಿದುಕೊಳ್ಳಬೇಕು. ಈ ಪದಾರ್ಥಗಳು ಆರೋಗ್ಯಕರವಾಗಿವೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳುವ ಅಗತ್ಯವಿದೆ. ಇದಕ್ಕೆ ನೆರವಾಗಲು ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದೆ. ತಿದ್ದುಪಡಿಯ ಕರಡು ಅಧಿಸೂಚನೆಯನ್ನು ಈಗ ಸಲಹೆಗಳು ಮತ್ತು ಲಕ್ಷೇಪಣೆಗಳಿಗಾಗಿ ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸಲಾಗುತ್ತದೆ. ಪ್ಯಾಕೇಜ್ ಮಾಡಿದ ಆಹಾರ ಕಂಪನಿಗಳು ಶಿಫಾರಸು ಮಾಡಲಾದ ಆಹಾರದ ಪೊಟ್ಟಣಗಳಿಗೆ ಸಂಬಂಧಿಸಿದಂತೆ ಒಟ್ಟು ಸಕ್ಕರೆ, ಒಟ್ಟು ಸ್ಯಾಚುರೇಟೆಡ್‌ ಕೊಬ್ಬು ಮತ್ತು ಸೋಡಿಯಂ ಪ್ರಮಾಣದ ಮಾಹಿತಿಯನ್ನು ದಪ್ಪ ಅಕ್ಷರಗಳಲ್ಲಿ ಮಾಹಿತಿಯನ್ನು ನೀಡಬೇಕಾಗುತ್ತದೆ ಎಂದು ಹೇಳಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

5 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

7 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

7 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

7 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

8 hours ago