Advertisement
MIRROR FOCUS

ಸಂಸ್ಕರಿಸಿದ ಆಹಾರದ ಕವರ್‌ನಲ್ಲಿ ಉಪ್ಪು ಮತ್ತು ಸಕ್ಕರೆ ಮಾಹಿತಿ ಕಡ್ಡಾಯ | ದಪ್ಪ ಅಕ್ಷರದಲ್ಲಿ ನಮೂದಿಸುವಂತೆ FSSAI ಅಧಿಸೂಚನೆ

Share

ಪ್ಯಾಕಿಂಗ್‌(Packed) ಮಾಡಿದ ಆಹಾರ ಪದಾರ್ಥಗಳಲ್ಲಿ(Food Items) ಇರುವ ಪೋಷಕಾಂಶಗಳ(Nutrition) ಪ್ರಮಾಣ ಕುರಿತ ಮಾಹಿತಿಯನ್ನು ದಪ್ಪ ಅಕ್ಷರಗಳಲ್ಲಿ ಮುದ್ರಿಸುವುದಕ್ಕೆ ಸಂಬಂಧಿಸಿದಂತೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ಕರಡು ಅಧಿಸೂಚನೆ ಪ್ರಕಟಿಸಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳು 2020ಕ್ಕೆ ತಿದ್ದುಪಡಿ ತರುವ ನಿರ್ಧಾರವನ್ನು ಪ್ರಾಧಿಕಾರದ 44ನೇ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಗ್ರಾಹಕರು ಸೇವಿಸುವ ಆಹಾರದಲ್ಲಿನ ಪೌಷ್ಠಿಕಾಂಶದ ಮೌಲ್ಯವನ್ನು ಅರ್ಥಮಾಡಿಕೊಳ್ಳಲು ಹಾಗೂ ಆರೋಗ್ಯಕರ ನಿರ್ಧಾರಗಳನ್ನು ಕೈಗೊಳ್ಳಲು ನೆರವು ನೀಡುವ ಉದ್ದೇಶ ಇದು ಹೊಂದಿದೆ ಎಂದು ಸಚಿವಾಲಯ ಹೇಳಿದೆ.ಪ್ಯಾಕ್ ಮಾಡಿದಲಹಾರ ಪದಾರ್ಥಗಳ ಹೆಚ್ಚಿನ ಸೇವನೆಯು ಹಲವು ರೋಗಗಳಿಗೆ ಕಾರಣವಾಗುತ್ತಿರುವುದರಿಂದ ಇಂತಹ ಆಹಾರ ಪದಾರ್ಥಗಳ ಸೇವನೆ ನಿಯಂತ್ರಿಸಬೇಕೆಂಬುದು ಪೌಷ್ಠಿಕಾಂಶ ತಜ್ಞರ ಅಭಿಪ್ರಾಯವಾಗಿದೆ. ಹೀಗಾಗಿ ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸಲು ಹೊಸ ನಿಯಮ ಪೂರಕವಾಗಲಿದೆ ಎಂದು ಹೇಳಿದೆ.

ಗ್ರಾಹಕರು ತಾವು ಬಳಸುವ ಆಹಾರದ ಪೊಟ್ಟಣಗಳಲ್ಲಿ ಇರುವ ಪೋಷಕಾಂಶಗಳ ಮೌಲ್ಯದ ಬಗ್ಗೆ ತಿಳಿದುಕೊಳ್ಳಬೇಕು. ಈ ಪದಾರ್ಥಗಳು ಆರೋಗ್ಯಕರವಾಗಿವೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳುವ ಅಗತ್ಯವಿದೆ. ಇದಕ್ಕೆ ನೆರವಾಗಲು ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದೆ. ತಿದ್ದುಪಡಿಯ ಕರಡು ಅಧಿಸೂಚನೆಯನ್ನು ಈಗ ಸಲಹೆಗಳು ಮತ್ತು ಲಕ್ಷೇಪಣೆಗಳಿಗಾಗಿ ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸಲಾಗುತ್ತದೆ. ಪ್ಯಾಕೇಜ್ ಮಾಡಿದ ಆಹಾರ ಕಂಪನಿಗಳು ಶಿಫಾರಸು ಮಾಡಲಾದ ಆಹಾರದ ಪೊಟ್ಟಣಗಳಿಗೆ ಸಂಬಂಧಿಸಿದಂತೆ ಒಟ್ಟು ಸಕ್ಕರೆ, ಒಟ್ಟು ಸ್ಯಾಚುರೇಟೆಡ್‌ ಕೊಬ್ಬು ಮತ್ತು ಸೋಡಿಯಂ ಪ್ರಮಾಣದ ಮಾಹಿತಿಯನ್ನು ದಪ್ಪ ಅಕ್ಷರಗಳಲ್ಲಿ ಮಾಹಿತಿಯನ್ನು ನೀಡಬೇಕಾಗುತ್ತದೆ ಎಂದು ಹೇಳಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

7 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

12 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

13 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

15 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

15 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago