Advertisement
MIRROR FOCUS

ಸಂಸ್ಕರಿಸಿದ ಆಹಾರದ ಕವರ್‌ನಲ್ಲಿ ಉಪ್ಪು ಮತ್ತು ಸಕ್ಕರೆ ಮಾಹಿತಿ ಕಡ್ಡಾಯ | ದಪ್ಪ ಅಕ್ಷರದಲ್ಲಿ ನಮೂದಿಸುವಂತೆ FSSAI ಅಧಿಸೂಚನೆ

Share

ಪ್ಯಾಕಿಂಗ್‌(Packed) ಮಾಡಿದ ಆಹಾರ ಪದಾರ್ಥಗಳಲ್ಲಿ(Food Items) ಇರುವ ಪೋಷಕಾಂಶಗಳ(Nutrition) ಪ್ರಮಾಣ ಕುರಿತ ಮಾಹಿತಿಯನ್ನು ದಪ್ಪ ಅಕ್ಷರಗಳಲ್ಲಿ ಮುದ್ರಿಸುವುದಕ್ಕೆ ಸಂಬಂಧಿಸಿದಂತೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ಕರಡು ಅಧಿಸೂಚನೆ ಪ್ರಕಟಿಸಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳು 2020ಕ್ಕೆ ತಿದ್ದುಪಡಿ ತರುವ ನಿರ್ಧಾರವನ್ನು ಪ್ರಾಧಿಕಾರದ 44ನೇ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಗ್ರಾಹಕರು ಸೇವಿಸುವ ಆಹಾರದಲ್ಲಿನ ಪೌಷ್ಠಿಕಾಂಶದ ಮೌಲ್ಯವನ್ನು ಅರ್ಥಮಾಡಿಕೊಳ್ಳಲು ಹಾಗೂ ಆರೋಗ್ಯಕರ ನಿರ್ಧಾರಗಳನ್ನು ಕೈಗೊಳ್ಳಲು ನೆರವು ನೀಡುವ ಉದ್ದೇಶ ಇದು ಹೊಂದಿದೆ ಎಂದು ಸಚಿವಾಲಯ ಹೇಳಿದೆ.ಪ್ಯಾಕ್ ಮಾಡಿದಲಹಾರ ಪದಾರ್ಥಗಳ ಹೆಚ್ಚಿನ ಸೇವನೆಯು ಹಲವು ರೋಗಗಳಿಗೆ ಕಾರಣವಾಗುತ್ತಿರುವುದರಿಂದ ಇಂತಹ ಆಹಾರ ಪದಾರ್ಥಗಳ ಸೇವನೆ ನಿಯಂತ್ರಿಸಬೇಕೆಂಬುದು ಪೌಷ್ಠಿಕಾಂಶ ತಜ್ಞರ ಅಭಿಪ್ರಾಯವಾಗಿದೆ. ಹೀಗಾಗಿ ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸಲು ಹೊಸ ನಿಯಮ ಪೂರಕವಾಗಲಿದೆ ಎಂದು ಹೇಳಿದೆ.

ಗ್ರಾಹಕರು ತಾವು ಬಳಸುವ ಆಹಾರದ ಪೊಟ್ಟಣಗಳಲ್ಲಿ ಇರುವ ಪೋಷಕಾಂಶಗಳ ಮೌಲ್ಯದ ಬಗ್ಗೆ ತಿಳಿದುಕೊಳ್ಳಬೇಕು. ಈ ಪದಾರ್ಥಗಳು ಆರೋಗ್ಯಕರವಾಗಿವೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳುವ ಅಗತ್ಯವಿದೆ. ಇದಕ್ಕೆ ನೆರವಾಗಲು ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದೆ. ತಿದ್ದುಪಡಿಯ ಕರಡು ಅಧಿಸೂಚನೆಯನ್ನು ಈಗ ಸಲಹೆಗಳು ಮತ್ತು ಲಕ್ಷೇಪಣೆಗಳಿಗಾಗಿ ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸಲಾಗುತ್ತದೆ. ಪ್ಯಾಕೇಜ್ ಮಾಡಿದ ಆಹಾರ ಕಂಪನಿಗಳು ಶಿಫಾರಸು ಮಾಡಲಾದ ಆಹಾರದ ಪೊಟ್ಟಣಗಳಿಗೆ ಸಂಬಂಧಿಸಿದಂತೆ ಒಟ್ಟು ಸಕ್ಕರೆ, ಒಟ್ಟು ಸ್ಯಾಚುರೇಟೆಡ್‌ ಕೊಬ್ಬು ಮತ್ತು ಸೋಡಿಯಂ ಪ್ರಮಾಣದ ಮಾಹಿತಿಯನ್ನು ದಪ್ಪ ಅಕ್ಷರಗಳಲ್ಲಿ ಮಾಹಿತಿಯನ್ನು ನೀಡಬೇಕಾಗುತ್ತದೆ ಎಂದು ಹೇಳಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

11 minutes ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

12 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

12 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

12 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

13 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

24 hours ago