​​​​ಬರಗಾಲದ ನಡುವೆ ಗಾಯದ ಮೇಲೆ ಬರೆ ಎಳೆದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ | ಲೀಟರ್​ ಹಾಲಿಗೆ 1.50 ರೂ. ಇಳಿಕೆ

December 26, 2023
1:09 PM

ಎಮ್ಮೆಗೆ ಜ್ವರ ಬಂದ್ರೆ ಎತ್ತಿಗೆ ಬರೆ ಅನ್ನುವ ಪರಿಸ್ಥಿತಿ ಆಗಿದೆ ರೈತರ ಕಥೆ. ಈ ಬಾರಿ ಮುಂಗಾರು (Monsoon) ಮತ್ತು ಹಿಂಗಾರು ಮಳೆ ಕೈಕೊಟ್ಟಿದೆ. ಇದರಿಂದ ರಾಜ್ಯದಲ್ಲಿ ಬರಗಾಲ(Drought) ಆವರಿಸಿದೆ. ಮತ್ತೊಂದಡೆ ತಮಿಳನಾಡಿಗೆ(Tamilnadu) ನಿತ್ಯ ಕಾವೇರಿ (Cauvery) ನೀರು ಹರಿಸಲಾಗುತ್ತಿದೆ. ಇದರಿಂದ ಜಲಾಶಯದಲ್ಲಿ(Dam) ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬೆಳೆಗಳಿಗೆ ನೀರಿಲ್ಲದೆ ರೈತರು(Farmer) ಪರದಾಡುತ್ತಿದ್ದಾರೆ. ಇದರ ನಡುವೆಯೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ  ಅನ್ನದಾತರ ಗಾಯದ ಮೇಲೆ ಬರೆ ಎಳೆದಿದೆ. ಹೌದು ಹಾಲಿನ (Milk) ದರ ಇಳಿಕೆ ಮಾಡಿ, ಪಶು ಆಹಾರದ ಬೆಲೆ ಏರಿಕೆ ಮಾಡಿದೆ.

ಇದರಿಂದ ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲ ಆಗಿದ್ದಾರೆ. ಪ್ರತೀ ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ ಹೊರಡಿಸಿದೆ. ಮತ್ತೊಂದೆಡೆ ಪಶು ಆಹಾರದ ಬೆಲೆ ಚೀಲಕ್ಕೆ 50 ರೂ. ಏರಿಕೆ ಮಾಡಿದೆ. ಈ ಪರಿಷ್ಕೃತ ದರ ಡಿಸೆಂಬರ್ 1ರಿಂದಲೇ ಜಾರಿಗೆ ಬಂದಿದೆ. ಮನ್ಮುಲ್ ಈ ಹಿಂದೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ 33.50 ರೂ ನೀಡುತ್ತಿತ್ತು. ಇದೀಗ 1.50 ರೂ. ಕಡಿತಗೊಳಿಸಿ 32 ರೂ. ನಿಗದಿ ಮಾಡಿದೆ.

ಬರದ ನಡುವೆಯೂ ಹಾಲಿನ ದರ ಇಳಿಕೆ ಮಾಡಿರುವುದಕ್ಕೆ ಮನ್ಮುಲ್ ಆಡಳಿತ ಮಂಡಳಿ ವಿರುದ್ಧ ರೈತರು ಆಕ್ರೋಶಗೊಂಡಿದ್ದಾರೆ. ಕೂಡಲೇ ದರ ಹೆಚ್ಚಳ ಮಾಡದಿದ್ದರೇ ಬೀದಿಗಿಳಿದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

1.50 per liter of milk. Manmul has issued an order to take it down. On the other hand the price of animal feed is Rs 50 per bag. has increased This revised rate is effective from December 1. Manmul was earlier paying Rs 33.50 per liter to milk producers. Now 1.50 Rs. Deduct 32 Rs. Scheduled.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ
ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror