Advertisement
MIRROR FOCUS

​​​​ಬರಗಾಲದ ನಡುವೆ ಗಾಯದ ಮೇಲೆ ಬರೆ ಎಳೆದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ | ಲೀಟರ್​ ಹಾಲಿಗೆ 1.50 ರೂ. ಇಳಿಕೆ

Share

ಎಮ್ಮೆಗೆ ಜ್ವರ ಬಂದ್ರೆ ಎತ್ತಿಗೆ ಬರೆ ಅನ್ನುವ ಪರಿಸ್ಥಿತಿ ಆಗಿದೆ ರೈತರ ಕಥೆ. ಈ ಬಾರಿ ಮುಂಗಾರು (Monsoon) ಮತ್ತು ಹಿಂಗಾರು ಮಳೆ ಕೈಕೊಟ್ಟಿದೆ. ಇದರಿಂದ ರಾಜ್ಯದಲ್ಲಿ ಬರಗಾಲ(Drought) ಆವರಿಸಿದೆ. ಮತ್ತೊಂದಡೆ ತಮಿಳನಾಡಿಗೆ(Tamilnadu) ನಿತ್ಯ ಕಾವೇರಿ (Cauvery) ನೀರು ಹರಿಸಲಾಗುತ್ತಿದೆ. ಇದರಿಂದ ಜಲಾಶಯದಲ್ಲಿ(Dam) ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬೆಳೆಗಳಿಗೆ ನೀರಿಲ್ಲದೆ ರೈತರು(Farmer) ಪರದಾಡುತ್ತಿದ್ದಾರೆ. ಇದರ ನಡುವೆಯೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ  ಅನ್ನದಾತರ ಗಾಯದ ಮೇಲೆ ಬರೆ ಎಳೆದಿದೆ. ಹೌದು ಹಾಲಿನ (Milk) ದರ ಇಳಿಕೆ ಮಾಡಿ, ಪಶು ಆಹಾರದ ಬೆಲೆ ಏರಿಕೆ ಮಾಡಿದೆ.

ಇದರಿಂದ ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲ ಆಗಿದ್ದಾರೆ. ಪ್ರತೀ ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ ಹೊರಡಿಸಿದೆ. ಮತ್ತೊಂದೆಡೆ ಪಶು ಆಹಾರದ ಬೆಲೆ ಚೀಲಕ್ಕೆ 50 ರೂ. ಏರಿಕೆ ಮಾಡಿದೆ. ಈ ಪರಿಷ್ಕೃತ ದರ ಡಿಸೆಂಬರ್ 1ರಿಂದಲೇ ಜಾರಿಗೆ ಬಂದಿದೆ. ಮನ್ಮುಲ್ ಈ ಹಿಂದೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ 33.50 ರೂ ನೀಡುತ್ತಿತ್ತು. ಇದೀಗ 1.50 ರೂ. ಕಡಿತಗೊಳಿಸಿ 32 ರೂ. ನಿಗದಿ ಮಾಡಿದೆ.

ಬರದ ನಡುವೆಯೂ ಹಾಲಿನ ದರ ಇಳಿಕೆ ಮಾಡಿರುವುದಕ್ಕೆ ಮನ್ಮುಲ್ ಆಡಳಿತ ಮಂಡಳಿ ವಿರುದ್ಧ ರೈತರು ಆಕ್ರೋಶಗೊಂಡಿದ್ದಾರೆ. ಕೂಡಲೇ ದರ ಹೆಚ್ಚಳ ಮಾಡದಿದ್ದರೇ ಬೀದಿಗಿಳಿದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

1.50 per liter of milk. Manmul has issued an order to take it down. On the other hand the price of animal feed is Rs 50 per bag. has increased This revised rate is effective from December 1. Manmul was earlier paying Rs 33.50 per liter to milk producers. Now 1.50 Rs. Deduct 32 Rs. Scheduled.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago