ಯಾರಾಗ್ತಾರೆ ಮುಂದಿನ ಸಿಎಂ? ಭವಿಷ್ಯ ನುಡಿದ ಮಂಡ್ಯದ ನಾಯಿ!

April 25, 2023
8:13 PM

ಕರ್ನಾಟಕದ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿವೆ. ಈ ಬಾರಿ ಯಾರು ಗೆಲ್ಲುತ್ತಾರೆ? ಯಾವ ಪಕ್ಷಕ್ಕೆ ಬಹುಮತ ಬರಲಿದೆ? ಕೊನೆಗೆ ಯಾರು ಮುಖ್ಯಮಂತ್ರಿ ಗದ್ದುಗೆ ಏರುತ್ತಾರೆ? ಸದ್ಯ ಚುನಾವಣೆ ಫಲಿತಾಂಶ ಬರುವವರೆಗೂ ಇದು ಮಿಲಿಯನ್ ಡಾಲರ್ ಪ್ರಶ್ನೆ! ಆದರೆ ಮಂಡ್ಯದಲ್ಲಿ   ನಾಯಿಯೊಂದು ಈ ಬಾರಿ ಯಾರು ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದೆ.

ಮಂಡ್ಯ ನಗರದ ಅಶೋಕನಗರದ ನಿವಾಸಿ ಗೋಪಿ ಎಂಬುವವರ ನಾಯಿಯೆ ಹೀಗೆ ಭವಿಷ್ಯ ಹೇಳಿರೋದು. ಈ ನಾಯಿಯ ಹೆಸರು ಭೈರವ!

ಮಂಡ್ಯದ ಗೋಪಿ ಅವರು ಕಾಲ ಭೈರವೇಶ್ವರನ ಭಕ್ತರಾಗಿದ್ದಾರೆ. ಕಾಲ ಭೈರವನಿಗೆ ಪೂಜೆ ಮಾಡಿದ ಗೋಪಿಯವರು ಮುಂದಿನ ಸಿಎಂ ಯಾರಾಗ್ತಾರೆ ಎಂದು ನಾಯಿ ಬಳಿ ಭವಿಷ್ಯ ಕೇಳಲಾಗಿದೆ.

ಕಳೆದ ಎರಡು ವರ್ಷಗಳಿಂದ ಭೈರವ ಎಂಬ ಈ ನಾಯಿಯ ಸೂಚಿಸುವ ಭವಿಷ್ಯ ನಿಜವಾಗುತ್ತಿದೆ ಎಂಬ ನಂಬಿಕೆಯಿದೆಯಂತೆ. ಬಸವರಾಜ ಬೊಮ್ಮಾಯಿ, ಎಚ್.​ಡಿ. ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಅವರ ಮೂರು ಫೋಟೋಗಳನ್ನು ಇಟ್ಟು ಅಪ್ಪಣೆ ಕೇಳಿದ್ದಾರೆ.

ಭೈರವ ನಾಯಿ ಕಚ್ಚಿದ್ದು ಇವರ ಫೋಟೋ!
ಈ ವೇಳೆ ಭೈರವ ನಾಯಿ ಎಚ್. ಡಿ.ಕುಮಾರಸ್ವಾಮಿ ಅವರ ಫೋಟೋವನ್ನು ಬಾಯಲ್ಲಿ ಕಚ್ಚಿ ಇವರೇ ಮುಂದಿನ ಸಿಎಂ ಆಗ್ತಾರೆ ಎಂದು ಸೂಚನೆ ನೀಡಿದೆ!

ಭೈರವ ನಾಯಿಯ ಹಲವು ಭವಿಷ್ಯಗಳು ಕಳೆದ ಎರಡು ವರ್ಷಗಳಿಂದ ನಿಜ ಆಗಿವೆಯಂತೆ. ಅದೇ ರೀತಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಎಂದು ಈ ಬಾರಿ ಸೂಚಿಸಿದ  ಭವಿಷ್ಯ ಏನಾಗುತ್ತೆ ಎಂದು ಕಾದು ನೋಡಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?
April 14, 2026
2:10 PM
by: ದ ರೂರಲ್ ಮಿರರ್.ಕಾಂ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ
ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ
April 14, 2026
7:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror