ಕರ್ನಾಟಕದ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿವೆ. ಈ ಬಾರಿ ಯಾರು ಗೆಲ್ಲುತ್ತಾರೆ? ಯಾವ ಪಕ್ಷಕ್ಕೆ ಬಹುಮತ ಬರಲಿದೆ? ಕೊನೆಗೆ ಯಾರು ಮುಖ್ಯಮಂತ್ರಿ ಗದ್ದುಗೆ ಏರುತ್ತಾರೆ? ಸದ್ಯ ಚುನಾವಣೆ ಫಲಿತಾಂಶ ಬರುವವರೆಗೂ ಇದು ಮಿಲಿಯನ್ ಡಾಲರ್ ಪ್ರಶ್ನೆ! ಆದರೆ ಮಂಡ್ಯದಲ್ಲಿ ನಾಯಿಯೊಂದು ಈ ಬಾರಿ ಯಾರು ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದೆ.
ಮಂಡ್ಯ ನಗರದ ಅಶೋಕನಗರದ ನಿವಾಸಿ ಗೋಪಿ ಎಂಬುವವರ ನಾಯಿಯೆ ಹೀಗೆ ಭವಿಷ್ಯ ಹೇಳಿರೋದು. ಈ ನಾಯಿಯ ಹೆಸರು ಭೈರವ!
ಮಂಡ್ಯದ ಗೋಪಿ ಅವರು ಕಾಲ ಭೈರವೇಶ್ವರನ ಭಕ್ತರಾಗಿದ್ದಾರೆ. ಕಾಲ ಭೈರವನಿಗೆ ಪೂಜೆ ಮಾಡಿದ ಗೋಪಿಯವರು ಮುಂದಿನ ಸಿಎಂ ಯಾರಾಗ್ತಾರೆ ಎಂದು ನಾಯಿ ಬಳಿ ಭವಿಷ್ಯ ಕೇಳಲಾಗಿದೆ.
ಕಳೆದ ಎರಡು ವರ್ಷಗಳಿಂದ ಭೈರವ ಎಂಬ ಈ ನಾಯಿಯ ಸೂಚಿಸುವ ಭವಿಷ್ಯ ನಿಜವಾಗುತ್ತಿದೆ ಎಂಬ ನಂಬಿಕೆಯಿದೆಯಂತೆ. ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಅವರ ಮೂರು ಫೋಟೋಗಳನ್ನು ಇಟ್ಟು ಅಪ್ಪಣೆ ಕೇಳಿದ್ದಾರೆ.
ಭೈರವ ನಾಯಿ ಕಚ್ಚಿದ್ದು ಇವರ ಫೋಟೋ!
ಈ ವೇಳೆ ಭೈರವ ನಾಯಿ ಎಚ್. ಡಿ.ಕುಮಾರಸ್ವಾಮಿ ಅವರ ಫೋಟೋವನ್ನು ಬಾಯಲ್ಲಿ ಕಚ್ಚಿ ಇವರೇ ಮುಂದಿನ ಸಿಎಂ ಆಗ್ತಾರೆ ಎಂದು ಸೂಚನೆ ನೀಡಿದೆ!
ಭೈರವ ನಾಯಿಯ ಹಲವು ಭವಿಷ್ಯಗಳು ಕಳೆದ ಎರಡು ವರ್ಷಗಳಿಂದ ನಿಜ ಆಗಿವೆಯಂತೆ. ಅದೇ ರೀತಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಎಂದು ಈ ಬಾರಿ ಸೂಚಿಸಿದ ಭವಿಷ್ಯ ಏನಾಗುತ್ತೆ ಎಂದು ಕಾದು ನೋಡಬೇಕಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…