ಕರ್ನಾಟಕದ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿವೆ. ಈ ಬಾರಿ ಯಾರು ಗೆಲ್ಲುತ್ತಾರೆ? ಯಾವ ಪಕ್ಷಕ್ಕೆ ಬಹುಮತ ಬರಲಿದೆ? ಕೊನೆಗೆ ಯಾರು ಮುಖ್ಯಮಂತ್ರಿ ಗದ್ದುಗೆ ಏರುತ್ತಾರೆ? ಸದ್ಯ ಚುನಾವಣೆ ಫಲಿತಾಂಶ ಬರುವವರೆಗೂ ಇದು ಮಿಲಿಯನ್ ಡಾಲರ್ ಪ್ರಶ್ನೆ! ಆದರೆ ಮಂಡ್ಯದಲ್ಲಿ ನಾಯಿಯೊಂದು ಈ ಬಾರಿ ಯಾರು ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದೆ.
ಮಂಡ್ಯ ನಗರದ ಅಶೋಕನಗರದ ನಿವಾಸಿ ಗೋಪಿ ಎಂಬುವವರ ನಾಯಿಯೆ ಹೀಗೆ ಭವಿಷ್ಯ ಹೇಳಿರೋದು. ಈ ನಾಯಿಯ ಹೆಸರು ಭೈರವ!
ಮಂಡ್ಯದ ಗೋಪಿ ಅವರು ಕಾಲ ಭೈರವೇಶ್ವರನ ಭಕ್ತರಾಗಿದ್ದಾರೆ. ಕಾಲ ಭೈರವನಿಗೆ ಪೂಜೆ ಮಾಡಿದ ಗೋಪಿಯವರು ಮುಂದಿನ ಸಿಎಂ ಯಾರಾಗ್ತಾರೆ ಎಂದು ನಾಯಿ ಬಳಿ ಭವಿಷ್ಯ ಕೇಳಲಾಗಿದೆ.
ಕಳೆದ ಎರಡು ವರ್ಷಗಳಿಂದ ಭೈರವ ಎಂಬ ಈ ನಾಯಿಯ ಸೂಚಿಸುವ ಭವಿಷ್ಯ ನಿಜವಾಗುತ್ತಿದೆ ಎಂಬ ನಂಬಿಕೆಯಿದೆಯಂತೆ. ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಅವರ ಮೂರು ಫೋಟೋಗಳನ್ನು ಇಟ್ಟು ಅಪ್ಪಣೆ ಕೇಳಿದ್ದಾರೆ.
ಭೈರವ ನಾಯಿ ಕಚ್ಚಿದ್ದು ಇವರ ಫೋಟೋ!
ಈ ವೇಳೆ ಭೈರವ ನಾಯಿ ಎಚ್. ಡಿ.ಕುಮಾರಸ್ವಾಮಿ ಅವರ ಫೋಟೋವನ್ನು ಬಾಯಲ್ಲಿ ಕಚ್ಚಿ ಇವರೇ ಮುಂದಿನ ಸಿಎಂ ಆಗ್ತಾರೆ ಎಂದು ಸೂಚನೆ ನೀಡಿದೆ!
ಭೈರವ ನಾಯಿಯ ಹಲವು ಭವಿಷ್ಯಗಳು ಕಳೆದ ಎರಡು ವರ್ಷಗಳಿಂದ ನಿಜ ಆಗಿವೆಯಂತೆ. ಅದೇ ರೀತಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಎಂದು ಈ ಬಾರಿ ಸೂಚಿಸಿದ ಭವಿಷ್ಯ ಏನಾಗುತ್ತೆ ಎಂದು ಕಾದು ನೋಡಬೇಕಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…