ಕರ್ನಾಟಕದ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿವೆ. ಈ ಬಾರಿ ಯಾರು ಗೆಲ್ಲುತ್ತಾರೆ? ಯಾವ ಪಕ್ಷಕ್ಕೆ ಬಹುಮತ ಬರಲಿದೆ? ಕೊನೆಗೆ ಯಾರು ಮುಖ್ಯಮಂತ್ರಿ ಗದ್ದುಗೆ ಏರುತ್ತಾರೆ? ಸದ್ಯ ಚುನಾವಣೆ ಫಲಿತಾಂಶ ಬರುವವರೆಗೂ ಇದು ಮಿಲಿಯನ್ ಡಾಲರ್ ಪ್ರಶ್ನೆ! ಆದರೆ ಮಂಡ್ಯದಲ್ಲಿ ನಾಯಿಯೊಂದು ಈ ಬಾರಿ ಯಾರು ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದೆ.
ಮಂಡ್ಯ ನಗರದ ಅಶೋಕನಗರದ ನಿವಾಸಿ ಗೋಪಿ ಎಂಬುವವರ ನಾಯಿಯೆ ಹೀಗೆ ಭವಿಷ್ಯ ಹೇಳಿರೋದು. ಈ ನಾಯಿಯ ಹೆಸರು ಭೈರವ!
ಮಂಡ್ಯದ ಗೋಪಿ ಅವರು ಕಾಲ ಭೈರವೇಶ್ವರನ ಭಕ್ತರಾಗಿದ್ದಾರೆ. ಕಾಲ ಭೈರವನಿಗೆ ಪೂಜೆ ಮಾಡಿದ ಗೋಪಿಯವರು ಮುಂದಿನ ಸಿಎಂ ಯಾರಾಗ್ತಾರೆ ಎಂದು ನಾಯಿ ಬಳಿ ಭವಿಷ್ಯ ಕೇಳಲಾಗಿದೆ.
ಕಳೆದ ಎರಡು ವರ್ಷಗಳಿಂದ ಭೈರವ ಎಂಬ ಈ ನಾಯಿಯ ಸೂಚಿಸುವ ಭವಿಷ್ಯ ನಿಜವಾಗುತ್ತಿದೆ ಎಂಬ ನಂಬಿಕೆಯಿದೆಯಂತೆ. ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಅವರ ಮೂರು ಫೋಟೋಗಳನ್ನು ಇಟ್ಟು ಅಪ್ಪಣೆ ಕೇಳಿದ್ದಾರೆ.
ಭೈರವ ನಾಯಿ ಕಚ್ಚಿದ್ದು ಇವರ ಫೋಟೋ!
ಈ ವೇಳೆ ಭೈರವ ನಾಯಿ ಎಚ್. ಡಿ.ಕುಮಾರಸ್ವಾಮಿ ಅವರ ಫೋಟೋವನ್ನು ಬಾಯಲ್ಲಿ ಕಚ್ಚಿ ಇವರೇ ಮುಂದಿನ ಸಿಎಂ ಆಗ್ತಾರೆ ಎಂದು ಸೂಚನೆ ನೀಡಿದೆ!
ಭೈರವ ನಾಯಿಯ ಹಲವು ಭವಿಷ್ಯಗಳು ಕಳೆದ ಎರಡು ವರ್ಷಗಳಿಂದ ನಿಜ ಆಗಿವೆಯಂತೆ. ಅದೇ ರೀತಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಎಂದು ಈ ಬಾರಿ ಸೂಚಿಸಿದ ಭವಿಷ್ಯ ಏನಾಗುತ್ತೆ ಎಂದು ಕಾದು ನೋಡಬೇಕಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…