Advertisement
ಸುದ್ದಿಗಳು

ಯಾರಾಗ್ತಾರೆ ಮುಂದಿನ ಸಿಎಂ? ಭವಿಷ್ಯ ನುಡಿದ ಮಂಡ್ಯದ ನಾಯಿ!

Share

ಕರ್ನಾಟಕದ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿವೆ. ಈ ಬಾರಿ ಯಾರು ಗೆಲ್ಲುತ್ತಾರೆ? ಯಾವ ಪಕ್ಷಕ್ಕೆ ಬಹುಮತ ಬರಲಿದೆ? ಕೊನೆಗೆ ಯಾರು ಮುಖ್ಯಮಂತ್ರಿ ಗದ್ದುಗೆ ಏರುತ್ತಾರೆ? ಸದ್ಯ ಚುನಾವಣೆ ಫಲಿತಾಂಶ ಬರುವವರೆಗೂ ಇದು ಮಿಲಿಯನ್ ಡಾಲರ್ ಪ್ರಶ್ನೆ! ಆದರೆ ಮಂಡ್ಯದಲ್ಲಿ   ನಾಯಿಯೊಂದು ಈ ಬಾರಿ ಯಾರು ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದೆ.

ಮಂಡ್ಯ ನಗರದ ಅಶೋಕನಗರದ ನಿವಾಸಿ ಗೋಪಿ ಎಂಬುವವರ ನಾಯಿಯೆ ಹೀಗೆ ಭವಿಷ್ಯ ಹೇಳಿರೋದು. ಈ ನಾಯಿಯ ಹೆಸರು ಭೈರವ!

ಮಂಡ್ಯದ ಗೋಪಿ ಅವರು ಕಾಲ ಭೈರವೇಶ್ವರನ ಭಕ್ತರಾಗಿದ್ದಾರೆ. ಕಾಲ ಭೈರವನಿಗೆ ಪೂಜೆ ಮಾಡಿದ ಗೋಪಿಯವರು ಮುಂದಿನ ಸಿಎಂ ಯಾರಾಗ್ತಾರೆ ಎಂದು ನಾಯಿ ಬಳಿ ಭವಿಷ್ಯ ಕೇಳಲಾಗಿದೆ.

ಕಳೆದ ಎರಡು ವರ್ಷಗಳಿಂದ ಭೈರವ ಎಂಬ ಈ ನಾಯಿಯ ಸೂಚಿಸುವ ಭವಿಷ್ಯ ನಿಜವಾಗುತ್ತಿದೆ ಎಂಬ ನಂಬಿಕೆಯಿದೆಯಂತೆ. ಬಸವರಾಜ ಬೊಮ್ಮಾಯಿ, ಎಚ್.​ಡಿ. ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಅವರ ಮೂರು ಫೋಟೋಗಳನ್ನು ಇಟ್ಟು ಅಪ್ಪಣೆ ಕೇಳಿದ್ದಾರೆ.

ಭೈರವ ನಾಯಿ ಕಚ್ಚಿದ್ದು ಇವರ ಫೋಟೋ!
ಈ ವೇಳೆ ಭೈರವ ನಾಯಿ ಎಚ್. ಡಿ.ಕುಮಾರಸ್ವಾಮಿ ಅವರ ಫೋಟೋವನ್ನು ಬಾಯಲ್ಲಿ ಕಚ್ಚಿ ಇವರೇ ಮುಂದಿನ ಸಿಎಂ ಆಗ್ತಾರೆ ಎಂದು ಸೂಚನೆ ನೀಡಿದೆ!

ಭೈರವ ನಾಯಿಯ ಹಲವು ಭವಿಷ್ಯಗಳು ಕಳೆದ ಎರಡು ವರ್ಷಗಳಿಂದ ನಿಜ ಆಗಿವೆಯಂತೆ. ಅದೇ ರೀತಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಎಂದು ಈ ಬಾರಿ ಸೂಚಿಸಿದ  ಭವಿಷ್ಯ ಏನಾಗುತ್ತೆ ಎಂದು ಕಾದು ನೋಡಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago