ಕರ್ನಾಟಕದ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿವೆ. ಈ ಬಾರಿ ಯಾರು ಗೆಲ್ಲುತ್ತಾರೆ? ಯಾವ ಪಕ್ಷಕ್ಕೆ ಬಹುಮತ ಬರಲಿದೆ? ಕೊನೆಗೆ ಯಾರು ಮುಖ್ಯಮಂತ್ರಿ ಗದ್ದುಗೆ ಏರುತ್ತಾರೆ? ಸದ್ಯ ಚುನಾವಣೆ ಫಲಿತಾಂಶ ಬರುವವರೆಗೂ ಇದು ಮಿಲಿಯನ್ ಡಾಲರ್ ಪ್ರಶ್ನೆ! ಆದರೆ ಮಂಡ್ಯದಲ್ಲಿ ನಾಯಿಯೊಂದು ಈ ಬಾರಿ ಯಾರು ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದೆ.
ಮಂಡ್ಯ ನಗರದ ಅಶೋಕನಗರದ ನಿವಾಸಿ ಗೋಪಿ ಎಂಬುವವರ ನಾಯಿಯೆ ಹೀಗೆ ಭವಿಷ್ಯ ಹೇಳಿರೋದು. ಈ ನಾಯಿಯ ಹೆಸರು ಭೈರವ!
ಮಂಡ್ಯದ ಗೋಪಿ ಅವರು ಕಾಲ ಭೈರವೇಶ್ವರನ ಭಕ್ತರಾಗಿದ್ದಾರೆ. ಕಾಲ ಭೈರವನಿಗೆ ಪೂಜೆ ಮಾಡಿದ ಗೋಪಿಯವರು ಮುಂದಿನ ಸಿಎಂ ಯಾರಾಗ್ತಾರೆ ಎಂದು ನಾಯಿ ಬಳಿ ಭವಿಷ್ಯ ಕೇಳಲಾಗಿದೆ.
ಕಳೆದ ಎರಡು ವರ್ಷಗಳಿಂದ ಭೈರವ ಎಂಬ ಈ ನಾಯಿಯ ಸೂಚಿಸುವ ಭವಿಷ್ಯ ನಿಜವಾಗುತ್ತಿದೆ ಎಂಬ ನಂಬಿಕೆಯಿದೆಯಂತೆ. ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಅವರ ಮೂರು ಫೋಟೋಗಳನ್ನು ಇಟ್ಟು ಅಪ್ಪಣೆ ಕೇಳಿದ್ದಾರೆ.
ಭೈರವ ನಾಯಿ ಕಚ್ಚಿದ್ದು ಇವರ ಫೋಟೋ!
ಈ ವೇಳೆ ಭೈರವ ನಾಯಿ ಎಚ್. ಡಿ.ಕುಮಾರಸ್ವಾಮಿ ಅವರ ಫೋಟೋವನ್ನು ಬಾಯಲ್ಲಿ ಕಚ್ಚಿ ಇವರೇ ಮುಂದಿನ ಸಿಎಂ ಆಗ್ತಾರೆ ಎಂದು ಸೂಚನೆ ನೀಡಿದೆ!
ಭೈರವ ನಾಯಿಯ ಹಲವು ಭವಿಷ್ಯಗಳು ಕಳೆದ ಎರಡು ವರ್ಷಗಳಿಂದ ನಿಜ ಆಗಿವೆಯಂತೆ. ಅದೇ ರೀತಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಎಂದು ಈ ಬಾರಿ ಸೂಚಿಸಿದ ಭವಿಷ್ಯ ಏನಾಗುತ್ತೆ ಎಂದು ಕಾದು ನೋಡಬೇಕಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…