#IndependenceDay | ಮಂಡ್ಯದ ರೈತನಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ ಕೆಂಪುಕೋಟೆಗೆ ಆಹ್ವಾನ | ಪ್ರಧಾನಮಂತ್ರಿ ಕಾರ್ಯಾಲಯದಿಂದ ಕರೆ |

August 11, 2023
1:44 PM
ಆ.15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ.

ಒಬ್ಬ ಹಳ್ಳಿಯ ರೈತ ಅದು ದೆಹಲಿಯಿಂದ ಸಾವಿರಾರು ಕಿ ಮೀ ದೂರದಲ್ಲಿರುವ ರೈತನಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗುತ್ತೆ ಎಂದರೆ ನಿಜಕ್ಕೂ ಆಶ್ಚರ್ಯದ ಸಂಗತಿ. ಮಂಡ್ಯ ಜಿಲ್ಲೆಯ ರೈತರೋರ್ವರಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ IndependenceDay 2023 ಕೇಂದ್ರ ಸರ್ಕಾರದಿಂದ ಆಹ್ವಾನ ದೊರೆತಿದೆ.

ಸ್ವತಃ ಪ್ರಧಾನಮಂತ್ರಿ ಕಾರ್ಯಾಲಯದಿಂದ ಮಂಡ್ಯದ  ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ. ಆಗಸ್ಟ್ 15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ಆಹ್ವಾನ ಬಂದಿದೆ. ಇವರು ಸಾವಯವ ಕೃಷಿಯಲ್ಲಿನ ಸಾಧಕ.
ಸಾವಯವ ಕೃಷಿಯಲ್ಲಿ ಸಾಧನೆಯನ್ನು ಪರಿಗಣಿಸಿ ಮಂಡ್ಯದ ರೈತ ವಿರೂಪಾಕ್ಷಪ್ಪ ಅವರಿಗೆ ಕೇಂದ್ರ ಸರ್ಕಾರದ ಆಹ್ವಾನ ಬಂದಿರುವುದು ನಿಜಕ್ಕೂ ಸಂತಸ ಮೂಡಿಸಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿ ಕೂಡ ಹೌದು. ಹಳ್ಳಿಯ ರೈತರೂ ತಾವು ದೇಶದ ಹಬ್ಬದಲ್ಲಿ ತಾವು ಕಣ್ಣಾರೆ ಕಂಡು ಅದು ದೆಹಲಿಗೆ ಹೋಗಿ ಸಂಭ್ರಮಿಸಬಹುದು ಎಂದು ಕನಸಲ್ಲೂ ಅಂದುಕೊಂಡಿರಲಿಕ್ಕಿಲ್ಲ. ಆದರೆ ಈಗ ಈ ರೈತನಿಗೆ ಈ ಅವಕಾಶ ದೊರಕಿದೆ. ನಿಜಕ್ಕೂ ಇದು ಎಲ್ಲರೂ ಹೆಮ್ಮೆ ಪಡುವ ವಿಚಾರವೇ ಸರಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು
August 9, 2026
6:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror