ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ ಆರಂಭವಾಗಲಿದೆ. ಈ ಬಾರಿ 4.50 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಿದ್ದು, ಈಗಾಗಲೇ 4.53 ಲಕ್ಷ ಟನ್ ಕಬ್ಬಿಗೆ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಹೇಳಿದ್ದಾರೆ.
ಮಂಡ್ಯ ನಗರದ ಮೈಷುಗರ್ ಕಾರ್ಖಾನೆ ಆವರಣದಲ್ಲಿ ನಡೆದ ರೈತರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿ, ಸಕ್ಕರೆ ಕಾರ್ಖಾನೆ ಆರಂಭಿಸಲು ಯಾವುದೇ ತೊಂದರೆಯಿಲ್ಲ. ಕಳೆದ ಬಾರಿಯಂತೆ ಸರ್ಕಾರದ ನೆರವು ಪಡೆಯದೇ ಈ ಬಾರಿಯೂ ಕಬ್ಬು ಅರೆಯುತ್ತೇವೆ. ಪ್ರತಿದಿನ ಕಾರ್ಖಾನೆಯಲ್ಲಿ ಐದು ಸಾವಿರ ಟನ್ ಕಬ್ಬು ಅರೆಯುವ ಸಾಮರ್ಥ್ಯವಿದ್ದು, ಕನಿಷ್ಟ 4 ಸಾವಿರ ಟನ್ ಕಬ್ಬು ಅರೆಯುತ್ತೇವೆ ಎಂದು ಸಭೆಗೆ ತಿಳಿಸಿದರು. ಎರಡು ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಕಳೆದ ವರ್ಷ ಕಾರ್ಖಾನೆ ಲಾಭಾಂಶ ಕಂಡಿದೆ. 2 ಲಕ್ಷ ಟನ್ ಕಬ್ಬು ಅರೆದು ಪ್ರತಿ ಟನ್ಗೆ 122ನಂತೆ 2.44 ಕೋಟಿ ಲಾಭ ಗಳಿಸಿದೆ. ಕಳೆದ ವರ್ಷ ಆಗಸ್ಟ್ 5ರಂದು ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯ ಪ್ರಾರಂಭವಾಗಿ 25000 ಮೆಟ್ರಿಕ್ ಟನ್ ಕಬ್ಬಿನ ಗುರಿಯ ಪೈಕಿ 2,01,900 ಮೆಟ್ರಿಕ್ ಟನ್ ಕಬ್ಬು (ಶೇ 97.5) ನುರಿಸಲಾಗಿದೆ ಎಂದು ತಿಳಿಸಿದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…