ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ ಆರಂಭವಾಗಲಿದೆ. ಈ ಬಾರಿ 4.50 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಿದ್ದು, ಈಗಾಗಲೇ 4.53 ಲಕ್ಷ ಟನ್ ಕಬ್ಬಿಗೆ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಹೇಳಿದ್ದಾರೆ.
ಮಂಡ್ಯ ನಗರದ ಮೈಷುಗರ್ ಕಾರ್ಖಾನೆ ಆವರಣದಲ್ಲಿ ನಡೆದ ರೈತರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿ, ಸಕ್ಕರೆ ಕಾರ್ಖಾನೆ ಆರಂಭಿಸಲು ಯಾವುದೇ ತೊಂದರೆಯಿಲ್ಲ. ಕಳೆದ ಬಾರಿಯಂತೆ ಸರ್ಕಾರದ ನೆರವು ಪಡೆಯದೇ ಈ ಬಾರಿಯೂ ಕಬ್ಬು ಅರೆಯುತ್ತೇವೆ. ಪ್ರತಿದಿನ ಕಾರ್ಖಾನೆಯಲ್ಲಿ ಐದು ಸಾವಿರ ಟನ್ ಕಬ್ಬು ಅರೆಯುವ ಸಾಮರ್ಥ್ಯವಿದ್ದು, ಕನಿಷ್ಟ 4 ಸಾವಿರ ಟನ್ ಕಬ್ಬು ಅರೆಯುತ್ತೇವೆ ಎಂದು ಸಭೆಗೆ ತಿಳಿಸಿದರು. ಎರಡು ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಕಳೆದ ವರ್ಷ ಕಾರ್ಖಾನೆ ಲಾಭಾಂಶ ಕಂಡಿದೆ. 2 ಲಕ್ಷ ಟನ್ ಕಬ್ಬು ಅರೆದು ಪ್ರತಿ ಟನ್ಗೆ 122ನಂತೆ 2.44 ಕೋಟಿ ಲಾಭ ಗಳಿಸಿದೆ. ಕಳೆದ ವರ್ಷ ಆಗಸ್ಟ್ 5ರಂದು ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯ ಪ್ರಾರಂಭವಾಗಿ 25000 ಮೆಟ್ರಿಕ್ ಟನ್ ಕಬ್ಬಿನ ಗುರಿಯ ಪೈಕಿ 2,01,900 ಮೆಟ್ರಿಕ್ ಟನ್ ಕಬ್ಬು (ಶೇ 97.5) ನುರಿಸಲಾಗಿದೆ ಎಂದು ತಿಳಿಸಿದರು.
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…
ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…
ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…