ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ ಆರಂಭವಾಗಲಿದೆ. ಈ ಬಾರಿ 4.50 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಿದ್ದು, ಈಗಾಗಲೇ 4.53 ಲಕ್ಷ ಟನ್ ಕಬ್ಬಿಗೆ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಹೇಳಿದ್ದಾರೆ.
ಮಂಡ್ಯ ನಗರದ ಮೈಷುಗರ್ ಕಾರ್ಖಾನೆ ಆವರಣದಲ್ಲಿ ನಡೆದ ರೈತರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿ, ಸಕ್ಕರೆ ಕಾರ್ಖಾನೆ ಆರಂಭಿಸಲು ಯಾವುದೇ ತೊಂದರೆಯಿಲ್ಲ. ಕಳೆದ ಬಾರಿಯಂತೆ ಸರ್ಕಾರದ ನೆರವು ಪಡೆಯದೇ ಈ ಬಾರಿಯೂ ಕಬ್ಬು ಅರೆಯುತ್ತೇವೆ. ಪ್ರತಿದಿನ ಕಾರ್ಖಾನೆಯಲ್ಲಿ ಐದು ಸಾವಿರ ಟನ್ ಕಬ್ಬು ಅರೆಯುವ ಸಾಮರ್ಥ್ಯವಿದ್ದು, ಕನಿಷ್ಟ 4 ಸಾವಿರ ಟನ್ ಕಬ್ಬು ಅರೆಯುತ್ತೇವೆ ಎಂದು ಸಭೆಗೆ ತಿಳಿಸಿದರು. ಎರಡು ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಕಳೆದ ವರ್ಷ ಕಾರ್ಖಾನೆ ಲಾಭಾಂಶ ಕಂಡಿದೆ. 2 ಲಕ್ಷ ಟನ್ ಕಬ್ಬು ಅರೆದು ಪ್ರತಿ ಟನ್ಗೆ 122ನಂತೆ 2.44 ಕೋಟಿ ಲಾಭ ಗಳಿಸಿದೆ. ಕಳೆದ ವರ್ಷ ಆಗಸ್ಟ್ 5ರಂದು ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯ ಪ್ರಾರಂಭವಾಗಿ 25000 ಮೆಟ್ರಿಕ್ ಟನ್ ಕಬ್ಬಿನ ಗುರಿಯ ಪೈಕಿ 2,01,900 ಮೆಟ್ರಿಕ್ ಟನ್ ಕಬ್ಬು (ಶೇ 97.5) ನುರಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…