Advertisement
MIRROR FOCUS

ಕನ್ನಡ ಓದುಗರ ಮನೆಮಗಳಾಗಿದ್ದ “ಮಂಗಳ” ಪತ್ರಿಕೆ ನಿಂತಿತು….! |

Share

ಕನ್ನಡ ಓದುಗರ ಮನೆ ಮಾತಾಗಿದ್ದ ಮಂಗಳ ವಾರಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಿದೆ. ಈ ವಾರ ಕೊನೆಯ ಸಂಚಿಕೆ ಮುದ್ರಣಗೊಂಡಿದೆ. ಈ ಬಗ್ಗೆ ಅಧಿಕೃತವಾಗಿ ಪತ್ರಿಕೆ ಸಂಪಾದಕರು ಪ್ರಕಟಣೆಯನ್ನು ನೀಡಿದ್ದಾರೆ. 40 ವರ್ಷಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಮಂಗಳ ಪ್ರಸಾರ ಸ್ಥಗಿತಗೊಂಡಿತು.ಅನೇಕ ಓದುಗರ ನಿರಾಸೆಗೊಂಡಿದ್ದಾರೆ.

Advertisement
Advertisement

ಕನ್ನಡ ಪತ್ರಿಕಾರಂಗದಲ್ಲಿ ಗುರುತಿಸಿಕೊಂಡಿದ್ದು ಮಾತ್ರವಲ್ಲ ಓದುಗ ವಲಯದಲ್ಲಿ ವಿಶೇಷ ಸ್ಥಾನಪಡೆದುಕೊಂಡಿದ್ದ ಮಂಗಳ ವಾರಪತ್ರಿಕೆ ಈ ವಾರ ಕೊನೆಯ ಸಂಚಿಕೆ ಪ್ರಕಟಿಸಿದೆ. ಗ್ರಾಮೀಣ ಭಾಗದಿಂದ ತೊಡಗಿ ಅನೇಕರ ಓದು ಆರಂಭವಾಗಿದ್ದೇ ಮಂಗಳ ವಾರಪತ್ರಿಕೆ ಮೂಲಕ. ಮಕ್ಕಳಿಗೆ ಬಾಲಮಂಗಳದ ಮೂಲಕ ಓದು ಆರಂಭಿಸಿ ಮಂಗಳ ಓದುವಂತೆ ಮಾಡಿ ಇತರ ಪತ್ರಿಕೆಗಳೂ ಓದುವ ಹಾಗೆ ಕಳೆದ 40 ವರ್ಷಗಳಲ್ಲಿ ಮಂಗಳ ಮಾಡಿತ್ತು. ಇದೀಗ ಮಂಗಳ ತನ್ನ ಯಾನ ನಿಲ್ಲಿಸಿದೆ.

ಕೊರೋನಾ ನಂತರ ಪತ್ರಿಕೋದ್ಯಮಕ್ಕೆ ಸಾಕಷ್ಟು ಸಂಕಟವಾಗಿತ್ತು. ಡಿಜಿಟಲ್‌ ಮಾಧ್ಯಮಗಳು ವೇಗ ಪಡೆದುಕೊಂಡವು. ಹಾಗಿದ್ದೂ  ಕಳೆದ ಮೂರು ವರ್ಷಗಳ ಕಾಲ ಮಂಗಳವನ್ನು ಮುನ್ನಡೆಸಿದರು.ಇದೀಗ  ಆರ್ಥಿಕ ತುರ್ತು ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ಪತ್ರಿಕೆ ಮುದ್ರಣ ಸ್ಥಗಿತಗೊಂಡಿದೆ. ಅನೇಕ ಓದುಗರಿಗೆ ನಿರಾಸೆಯುಂಟಾಗಿದೆ.

ಗ್ರಾಮೀಣ  ಭಾಗದಲ್ಲಿ ಟಿವಿ, ಮೊಬೈಲ್‌ ಇಲ್ಲದೇ ಇರುವ ಸಂದರ್ಭದಲ್ಲಿ ಧಾರವಾಹಿ, ಕತೆ, ಕವನ ಸೇರಿದಂತೆ ಸಮಗ್ರ ಓದಿಗೆ ಮಂಗಳ ಪತ್ರಿಕೆ ಬಹುತೇಕ ಮನೆಗಳಿಗೆ ಬರುತ್ತಿತ್ತು. ಈ ಕತೆಗಳು ಕಾರ್ಯಕ್ರಮಗಳ ಸಂದರ್ಭ ಚರ್ಚೆಯೂ ಆಗುತ್ತಿತ್ತು. ಗ್ರಾಮೀಣ ಭಾಗದ ಓದುಗರಿಗೆ ಅಂದು ಮಂಗಳ ವಾರದ ಖಾಯಂ ಪುಸ್ತಕ. ಅನೇಕ ಓದುಗರನ್ನು ಮಂಗಳ ಸೃಷ್ಟಿ ಮಾಡಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

16 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago