MIRROR FOCUS

ಕನ್ನಡ ಓದುಗರ ಮನೆಮಗಳಾಗಿದ್ದ “ಮಂಗಳ” ಪತ್ರಿಕೆ ನಿಂತಿತು….! |

Share

ಕನ್ನಡ ಓದುಗರ ಮನೆ ಮಾತಾಗಿದ್ದ ಮಂಗಳ ವಾರಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಿದೆ. ಈ ವಾರ ಕೊನೆಯ ಸಂಚಿಕೆ ಮುದ್ರಣಗೊಂಡಿದೆ. ಈ ಬಗ್ಗೆ ಅಧಿಕೃತವಾಗಿ ಪತ್ರಿಕೆ ಸಂಪಾದಕರು ಪ್ರಕಟಣೆಯನ್ನು ನೀಡಿದ್ದಾರೆ. 40 ವರ್ಷಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಮಂಗಳ ಪ್ರಸಾರ ಸ್ಥಗಿತಗೊಂಡಿತು.ಅನೇಕ ಓದುಗರ ನಿರಾಸೆಗೊಂಡಿದ್ದಾರೆ.

Advertisement

ಕನ್ನಡ ಪತ್ರಿಕಾರಂಗದಲ್ಲಿ ಗುರುತಿಸಿಕೊಂಡಿದ್ದು ಮಾತ್ರವಲ್ಲ ಓದುಗ ವಲಯದಲ್ಲಿ ವಿಶೇಷ ಸ್ಥಾನಪಡೆದುಕೊಂಡಿದ್ದ ಮಂಗಳ ವಾರಪತ್ರಿಕೆ ಈ ವಾರ ಕೊನೆಯ ಸಂಚಿಕೆ ಪ್ರಕಟಿಸಿದೆ. ಗ್ರಾಮೀಣ ಭಾಗದಿಂದ ತೊಡಗಿ ಅನೇಕರ ಓದು ಆರಂಭವಾಗಿದ್ದೇ ಮಂಗಳ ವಾರಪತ್ರಿಕೆ ಮೂಲಕ. ಮಕ್ಕಳಿಗೆ ಬಾಲಮಂಗಳದ ಮೂಲಕ ಓದು ಆರಂಭಿಸಿ ಮಂಗಳ ಓದುವಂತೆ ಮಾಡಿ ಇತರ ಪತ್ರಿಕೆಗಳೂ ಓದುವ ಹಾಗೆ ಕಳೆದ 40 ವರ್ಷಗಳಲ್ಲಿ ಮಂಗಳ ಮಾಡಿತ್ತು. ಇದೀಗ ಮಂಗಳ ತನ್ನ ಯಾನ ನಿಲ್ಲಿಸಿದೆ.

ಕೊರೋನಾ ನಂತರ ಪತ್ರಿಕೋದ್ಯಮಕ್ಕೆ ಸಾಕಷ್ಟು ಸಂಕಟವಾಗಿತ್ತು. ಡಿಜಿಟಲ್‌ ಮಾಧ್ಯಮಗಳು ವೇಗ ಪಡೆದುಕೊಂಡವು. ಹಾಗಿದ್ದೂ  ಕಳೆದ ಮೂರು ವರ್ಷಗಳ ಕಾಲ ಮಂಗಳವನ್ನು ಮುನ್ನಡೆಸಿದರು.ಇದೀಗ  ಆರ್ಥಿಕ ತುರ್ತು ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ಪತ್ರಿಕೆ ಮುದ್ರಣ ಸ್ಥಗಿತಗೊಂಡಿದೆ. ಅನೇಕ ಓದುಗರಿಗೆ ನಿರಾಸೆಯುಂಟಾಗಿದೆ.

ಗ್ರಾಮೀಣ  ಭಾಗದಲ್ಲಿ ಟಿವಿ, ಮೊಬೈಲ್‌ ಇಲ್ಲದೇ ಇರುವ ಸಂದರ್ಭದಲ್ಲಿ ಧಾರವಾಹಿ, ಕತೆ, ಕವನ ಸೇರಿದಂತೆ ಸಮಗ್ರ ಓದಿಗೆ ಮಂಗಳ ಪತ್ರಿಕೆ ಬಹುತೇಕ ಮನೆಗಳಿಗೆ ಬರುತ್ತಿತ್ತು. ಈ ಕತೆಗಳು ಕಾರ್ಯಕ್ರಮಗಳ ಸಂದರ್ಭ ಚರ್ಚೆಯೂ ಆಗುತ್ತಿತ್ತು. ಗ್ರಾಮೀಣ ಭಾಗದ ಓದುಗರಿಗೆ ಅಂದು ಮಂಗಳ ವಾರದ ಖಾಯಂ ಪುಸ್ತಕ. ಅನೇಕ ಓದುಗರನ್ನು ಮಂಗಳ ಸೃಷ್ಟಿ ಮಾಡಿತ್ತು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

4 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

13 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

13 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

13 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

13 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

14 hours ago