ಕನ್ನಡ ಓದುಗರ ಮನೆ ಮಾತಾಗಿದ್ದ ಮಂಗಳ ವಾರಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಿದೆ. ಈ ವಾರ ಕೊನೆಯ ಸಂಚಿಕೆ ಮುದ್ರಣಗೊಂಡಿದೆ. ಈ ಬಗ್ಗೆ ಅಧಿಕೃತವಾಗಿ ಪತ್ರಿಕೆ ಸಂಪಾದಕರು ಪ್ರಕಟಣೆಯನ್ನು ನೀಡಿದ್ದಾರೆ. 40 ವರ್ಷಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಮಂಗಳ ಪ್ರಸಾರ ಸ್ಥಗಿತಗೊಂಡಿತು.ಅನೇಕ ಓದುಗರ ನಿರಾಸೆಗೊಂಡಿದ್ದಾರೆ.
ಕನ್ನಡ ಪತ್ರಿಕಾರಂಗದಲ್ಲಿ ಗುರುತಿಸಿಕೊಂಡಿದ್ದು ಮಾತ್ರವಲ್ಲ ಓದುಗ ವಲಯದಲ್ಲಿ ವಿಶೇಷ ಸ್ಥಾನಪಡೆದುಕೊಂಡಿದ್ದ ಮಂಗಳ ವಾರಪತ್ರಿಕೆ ಈ ವಾರ ಕೊನೆಯ ಸಂಚಿಕೆ ಪ್ರಕಟಿಸಿದೆ. ಗ್ರಾಮೀಣ ಭಾಗದಿಂದ ತೊಡಗಿ ಅನೇಕರ ಓದು ಆರಂಭವಾಗಿದ್ದೇ ಮಂಗಳ ವಾರಪತ್ರಿಕೆ ಮೂಲಕ. ಮಕ್ಕಳಿಗೆ ಬಾಲಮಂಗಳದ ಮೂಲಕ ಓದು ಆರಂಭಿಸಿ ಮಂಗಳ ಓದುವಂತೆ ಮಾಡಿ ಇತರ ಪತ್ರಿಕೆಗಳೂ ಓದುವ ಹಾಗೆ ಕಳೆದ 40 ವರ್ಷಗಳಲ್ಲಿ ಮಂಗಳ ಮಾಡಿತ್ತು. ಇದೀಗ ಮಂಗಳ ತನ್ನ ಯಾನ ನಿಲ್ಲಿಸಿದೆ.
ಕೊರೋನಾ ನಂತರ ಪತ್ರಿಕೋದ್ಯಮಕ್ಕೆ ಸಾಕಷ್ಟು ಸಂಕಟವಾಗಿತ್ತು. ಡಿಜಿಟಲ್ ಮಾಧ್ಯಮಗಳು ವೇಗ ಪಡೆದುಕೊಂಡವು. ಹಾಗಿದ್ದೂ ಕಳೆದ ಮೂರು ವರ್ಷಗಳ ಕಾಲ ಮಂಗಳವನ್ನು ಮುನ್ನಡೆಸಿದರು.ಇದೀಗ ಆರ್ಥಿಕ ತುರ್ತು ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ಪತ್ರಿಕೆ ಮುದ್ರಣ ಸ್ಥಗಿತಗೊಂಡಿದೆ. ಅನೇಕ ಓದುಗರಿಗೆ ನಿರಾಸೆಯುಂಟಾಗಿದೆ.
ಗ್ರಾಮೀಣ ಭಾಗದಲ್ಲಿ ಟಿವಿ, ಮೊಬೈಲ್ ಇಲ್ಲದೇ ಇರುವ ಸಂದರ್ಭದಲ್ಲಿ ಧಾರವಾಹಿ, ಕತೆ, ಕವನ ಸೇರಿದಂತೆ ಸಮಗ್ರ ಓದಿಗೆ ಮಂಗಳ ಪತ್ರಿಕೆ ಬಹುತೇಕ ಮನೆಗಳಿಗೆ ಬರುತ್ತಿತ್ತು. ಈ ಕತೆಗಳು ಕಾರ್ಯಕ್ರಮಗಳ ಸಂದರ್ಭ ಚರ್ಚೆಯೂ ಆಗುತ್ತಿತ್ತು. ಗ್ರಾಮೀಣ ಭಾಗದ ಓದುಗರಿಗೆ ಅಂದು ಮಂಗಳ ವಾರದ ಖಾಯಂ ಪುಸ್ತಕ. ಅನೇಕ ಓದುಗರನ್ನು ಮಂಗಳ ಸೃಷ್ಟಿ ಮಾಡಿತ್ತು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…