Advertisement
MIRROR FOCUS

ಕನ್ನಡ ಓದುಗರ ಮನೆಮಗಳಾಗಿದ್ದ “ಮಂಗಳ” ಪತ್ರಿಕೆ ನಿಂತಿತು….! |

Share

ಕನ್ನಡ ಓದುಗರ ಮನೆ ಮಾತಾಗಿದ್ದ ಮಂಗಳ ವಾರಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಿದೆ. ಈ ವಾರ ಕೊನೆಯ ಸಂಚಿಕೆ ಮುದ್ರಣಗೊಂಡಿದೆ. ಈ ಬಗ್ಗೆ ಅಧಿಕೃತವಾಗಿ ಪತ್ರಿಕೆ ಸಂಪಾದಕರು ಪ್ರಕಟಣೆಯನ್ನು ನೀಡಿದ್ದಾರೆ. 40 ವರ್ಷಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಮಂಗಳ ಪ್ರಸಾರ ಸ್ಥಗಿತಗೊಂಡಿತು.ಅನೇಕ ಓದುಗರ ನಿರಾಸೆಗೊಂಡಿದ್ದಾರೆ.

ಕನ್ನಡ ಪತ್ರಿಕಾರಂಗದಲ್ಲಿ ಗುರುತಿಸಿಕೊಂಡಿದ್ದು ಮಾತ್ರವಲ್ಲ ಓದುಗ ವಲಯದಲ್ಲಿ ವಿಶೇಷ ಸ್ಥಾನಪಡೆದುಕೊಂಡಿದ್ದ ಮಂಗಳ ವಾರಪತ್ರಿಕೆ ಈ ವಾರ ಕೊನೆಯ ಸಂಚಿಕೆ ಪ್ರಕಟಿಸಿದೆ. ಗ್ರಾಮೀಣ ಭಾಗದಿಂದ ತೊಡಗಿ ಅನೇಕರ ಓದು ಆರಂಭವಾಗಿದ್ದೇ ಮಂಗಳ ವಾರಪತ್ರಿಕೆ ಮೂಲಕ. ಮಕ್ಕಳಿಗೆ ಬಾಲಮಂಗಳದ ಮೂಲಕ ಓದು ಆರಂಭಿಸಿ ಮಂಗಳ ಓದುವಂತೆ ಮಾಡಿ ಇತರ ಪತ್ರಿಕೆಗಳೂ ಓದುವ ಹಾಗೆ ಕಳೆದ 40 ವರ್ಷಗಳಲ್ಲಿ ಮಂಗಳ ಮಾಡಿತ್ತು. ಇದೀಗ ಮಂಗಳ ತನ್ನ ಯಾನ ನಿಲ್ಲಿಸಿದೆ.

ಕೊರೋನಾ ನಂತರ ಪತ್ರಿಕೋದ್ಯಮಕ್ಕೆ ಸಾಕಷ್ಟು ಸಂಕಟವಾಗಿತ್ತು. ಡಿಜಿಟಲ್‌ ಮಾಧ್ಯಮಗಳು ವೇಗ ಪಡೆದುಕೊಂಡವು. ಹಾಗಿದ್ದೂ  ಕಳೆದ ಮೂರು ವರ್ಷಗಳ ಕಾಲ ಮಂಗಳವನ್ನು ಮುನ್ನಡೆಸಿದರು.ಇದೀಗ  ಆರ್ಥಿಕ ತುರ್ತು ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ಪತ್ರಿಕೆ ಮುದ್ರಣ ಸ್ಥಗಿತಗೊಂಡಿದೆ. ಅನೇಕ ಓದುಗರಿಗೆ ನಿರಾಸೆಯುಂಟಾಗಿದೆ.

ಗ್ರಾಮೀಣ  ಭಾಗದಲ್ಲಿ ಟಿವಿ, ಮೊಬೈಲ್‌ ಇಲ್ಲದೇ ಇರುವ ಸಂದರ್ಭದಲ್ಲಿ ಧಾರವಾಹಿ, ಕತೆ, ಕವನ ಸೇರಿದಂತೆ ಸಮಗ್ರ ಓದಿಗೆ ಮಂಗಳ ಪತ್ರಿಕೆ ಬಹುತೇಕ ಮನೆಗಳಿಗೆ ಬರುತ್ತಿತ್ತು. ಈ ಕತೆಗಳು ಕಾರ್ಯಕ್ರಮಗಳ ಸಂದರ್ಭ ಚರ್ಚೆಯೂ ಆಗುತ್ತಿತ್ತು. ಗ್ರಾಮೀಣ ಭಾಗದ ಓದುಗರಿಗೆ ಅಂದು ಮಂಗಳ ವಾರದ ಖಾಯಂ ಪುಸ್ತಕ. ಅನೇಕ ಓದುಗರನ್ನು ಮಂಗಳ ಸೃಷ್ಟಿ ಮಾಡಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

8 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

17 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

18 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

19 hours ago