ಕನ್ನಡ ಓದುಗರ ಮನೆ ಮಾತಾಗಿದ್ದ ಮಂಗಳ ವಾರಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಿದೆ. ಈ ವಾರ ಕೊನೆಯ ಸಂಚಿಕೆ ಮುದ್ರಣಗೊಂಡಿದೆ. ಈ ಬಗ್ಗೆ ಅಧಿಕೃತವಾಗಿ ಪತ್ರಿಕೆ ಸಂಪಾದಕರು ಪ್ರಕಟಣೆಯನ್ನು ನೀಡಿದ್ದಾರೆ. 40 ವರ್ಷಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಮಂಗಳ ಪ್ರಸಾರ ಸ್ಥಗಿತಗೊಂಡಿತು.ಅನೇಕ ಓದುಗರ ನಿರಾಸೆಗೊಂಡಿದ್ದಾರೆ.
ಕನ್ನಡ ಪತ್ರಿಕಾರಂಗದಲ್ಲಿ ಗುರುತಿಸಿಕೊಂಡಿದ್ದು ಮಾತ್ರವಲ್ಲ ಓದುಗ ವಲಯದಲ್ಲಿ ವಿಶೇಷ ಸ್ಥಾನಪಡೆದುಕೊಂಡಿದ್ದ ಮಂಗಳ ವಾರಪತ್ರಿಕೆ ಈ ವಾರ ಕೊನೆಯ ಸಂಚಿಕೆ ಪ್ರಕಟಿಸಿದೆ. ಗ್ರಾಮೀಣ ಭಾಗದಿಂದ ತೊಡಗಿ ಅನೇಕರ ಓದು ಆರಂಭವಾಗಿದ್ದೇ ಮಂಗಳ ವಾರಪತ್ರಿಕೆ ಮೂಲಕ. ಮಕ್ಕಳಿಗೆ ಬಾಲಮಂಗಳದ ಮೂಲಕ ಓದು ಆರಂಭಿಸಿ ಮಂಗಳ ಓದುವಂತೆ ಮಾಡಿ ಇತರ ಪತ್ರಿಕೆಗಳೂ ಓದುವ ಹಾಗೆ ಕಳೆದ 40 ವರ್ಷಗಳಲ್ಲಿ ಮಂಗಳ ಮಾಡಿತ್ತು. ಇದೀಗ ಮಂಗಳ ತನ್ನ ಯಾನ ನಿಲ್ಲಿಸಿದೆ.
ಕೊರೋನಾ ನಂತರ ಪತ್ರಿಕೋದ್ಯಮಕ್ಕೆ ಸಾಕಷ್ಟು ಸಂಕಟವಾಗಿತ್ತು. ಡಿಜಿಟಲ್ ಮಾಧ್ಯಮಗಳು ವೇಗ ಪಡೆದುಕೊಂಡವು. ಹಾಗಿದ್ದೂ ಕಳೆದ ಮೂರು ವರ್ಷಗಳ ಕಾಲ ಮಂಗಳವನ್ನು ಮುನ್ನಡೆಸಿದರು.ಇದೀಗ ಆರ್ಥಿಕ ತುರ್ತು ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ಪತ್ರಿಕೆ ಮುದ್ರಣ ಸ್ಥಗಿತಗೊಂಡಿದೆ. ಅನೇಕ ಓದುಗರಿಗೆ ನಿರಾಸೆಯುಂಟಾಗಿದೆ.
ಗ್ರಾಮೀಣ ಭಾಗದಲ್ಲಿ ಟಿವಿ, ಮೊಬೈಲ್ ಇಲ್ಲದೇ ಇರುವ ಸಂದರ್ಭದಲ್ಲಿ ಧಾರವಾಹಿ, ಕತೆ, ಕವನ ಸೇರಿದಂತೆ ಸಮಗ್ರ ಓದಿಗೆ ಮಂಗಳ ಪತ್ರಿಕೆ ಬಹುತೇಕ ಮನೆಗಳಿಗೆ ಬರುತ್ತಿತ್ತು. ಈ ಕತೆಗಳು ಕಾರ್ಯಕ್ರಮಗಳ ಸಂದರ್ಭ ಚರ್ಚೆಯೂ ಆಗುತ್ತಿತ್ತು. ಗ್ರಾಮೀಣ ಭಾಗದ ಓದುಗರಿಗೆ ಅಂದು ಮಂಗಳ ವಾರದ ಖಾಯಂ ಪುಸ್ತಕ. ಅನೇಕ ಓದುಗರನ್ನು ಮಂಗಳ ಸೃಷ್ಟಿ ಮಾಡಿತ್ತು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…