Advertisement
MIRROR FOCUS

ಕನ್ನಡ ಓದುಗರ ಮನೆಮಗಳಾಗಿದ್ದ “ಮಂಗಳ” ಪತ್ರಿಕೆ ನಿಂತಿತು….! |

Share

ಕನ್ನಡ ಓದುಗರ ಮನೆ ಮಾತಾಗಿದ್ದ ಮಂಗಳ ವಾರಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಿದೆ. ಈ ವಾರ ಕೊನೆಯ ಸಂಚಿಕೆ ಮುದ್ರಣಗೊಂಡಿದೆ. ಈ ಬಗ್ಗೆ ಅಧಿಕೃತವಾಗಿ ಪತ್ರಿಕೆ ಸಂಪಾದಕರು ಪ್ರಕಟಣೆಯನ್ನು ನೀಡಿದ್ದಾರೆ. 40 ವರ್ಷಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಮಂಗಳ ಪ್ರಸಾರ ಸ್ಥಗಿತಗೊಂಡಿತು.ಅನೇಕ ಓದುಗರ ನಿರಾಸೆಗೊಂಡಿದ್ದಾರೆ.

ಕನ್ನಡ ಪತ್ರಿಕಾರಂಗದಲ್ಲಿ ಗುರುತಿಸಿಕೊಂಡಿದ್ದು ಮಾತ್ರವಲ್ಲ ಓದುಗ ವಲಯದಲ್ಲಿ ವಿಶೇಷ ಸ್ಥಾನಪಡೆದುಕೊಂಡಿದ್ದ ಮಂಗಳ ವಾರಪತ್ರಿಕೆ ಈ ವಾರ ಕೊನೆಯ ಸಂಚಿಕೆ ಪ್ರಕಟಿಸಿದೆ. ಗ್ರಾಮೀಣ ಭಾಗದಿಂದ ತೊಡಗಿ ಅನೇಕರ ಓದು ಆರಂಭವಾಗಿದ್ದೇ ಮಂಗಳ ವಾರಪತ್ರಿಕೆ ಮೂಲಕ. ಮಕ್ಕಳಿಗೆ ಬಾಲಮಂಗಳದ ಮೂಲಕ ಓದು ಆರಂಭಿಸಿ ಮಂಗಳ ಓದುವಂತೆ ಮಾಡಿ ಇತರ ಪತ್ರಿಕೆಗಳೂ ಓದುವ ಹಾಗೆ ಕಳೆದ 40 ವರ್ಷಗಳಲ್ಲಿ ಮಂಗಳ ಮಾಡಿತ್ತು. ಇದೀಗ ಮಂಗಳ ತನ್ನ ಯಾನ ನಿಲ್ಲಿಸಿದೆ.

ಕೊರೋನಾ ನಂತರ ಪತ್ರಿಕೋದ್ಯಮಕ್ಕೆ ಸಾಕಷ್ಟು ಸಂಕಟವಾಗಿತ್ತು. ಡಿಜಿಟಲ್‌ ಮಾಧ್ಯಮಗಳು ವೇಗ ಪಡೆದುಕೊಂಡವು. ಹಾಗಿದ್ದೂ  ಕಳೆದ ಮೂರು ವರ್ಷಗಳ ಕಾಲ ಮಂಗಳವನ್ನು ಮುನ್ನಡೆಸಿದರು.ಇದೀಗ  ಆರ್ಥಿಕ ತುರ್ತು ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ಪತ್ರಿಕೆ ಮುದ್ರಣ ಸ್ಥಗಿತಗೊಂಡಿದೆ. ಅನೇಕ ಓದುಗರಿಗೆ ನಿರಾಸೆಯುಂಟಾಗಿದೆ.

ಗ್ರಾಮೀಣ  ಭಾಗದಲ್ಲಿ ಟಿವಿ, ಮೊಬೈಲ್‌ ಇಲ್ಲದೇ ಇರುವ ಸಂದರ್ಭದಲ್ಲಿ ಧಾರವಾಹಿ, ಕತೆ, ಕವನ ಸೇರಿದಂತೆ ಸಮಗ್ರ ಓದಿಗೆ ಮಂಗಳ ಪತ್ರಿಕೆ ಬಹುತೇಕ ಮನೆಗಳಿಗೆ ಬರುತ್ತಿತ್ತು. ಈ ಕತೆಗಳು ಕಾರ್ಯಕ್ರಮಗಳ ಸಂದರ್ಭ ಚರ್ಚೆಯೂ ಆಗುತ್ತಿತ್ತು. ಗ್ರಾಮೀಣ ಭಾಗದ ಓದುಗರಿಗೆ ಅಂದು ಮಂಗಳ ವಾರದ ಖಾಯಂ ಪುಸ್ತಕ. ಅನೇಕ ಓದುಗರನ್ನು ಮಂಗಳ ಸೃಷ್ಟಿ ಮಾಡಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

5 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

14 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

18 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago