Advertisement
ಸುದ್ದಿಗಳು

ಮಂಗಳೂರು | ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಮ್‌ ಆದ್ಮಿ ಪಾರ್ಟಿ ಒತ್ತಾಯ | ಜಿಲ್ಲಾಧಿಕಾರಿಗಳಿಗೆ ಮನವಿ |

Share

ಪೌರಕಾರ್ಮಿಕರ ಸೇವಾ ಖಾಯಮಾತಿ, ಸಮಾನ ವೇತನ, ಇತರ ಬೇಡಿಕೆಗಳನ್ನು ಈಡೇರಿಸಲು ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಕೂಡಲೇ ಸರ್ಕಾರ ಸ್ಪಂದನೆ ನೀಡಬೇಕು ಎಂದು ದ.ಕ ಜಿಲ್ಲಾ ಆಮ್ ಆದ್ಮಿ ಪಕ್ಷವು ಒತ್ತಾಯಿಸಿ ದ.ಕ ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಒತ್ತಾಯವನ್ನು ಮಾಡಿದೆ.

ದ.ಕ ಜಿಲ್ಲೆಯ ಎಎಪಿ ಜಿಲ್ಲಾಧ್ಯಕ್ಷರಾದ ಸಂತೋಷ್ ಕಾಮತ್ ನೇತೃತ್ವದಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಎಲ್ಲಾ ಮುಖಂಡರು ಸರ್ವ ರೀತಿಯ ಬೆಂಬಲ ನೀಡಲು ತೀರ್ಮಾನ ಕೈಗೊಳ್ಳಲಾಯಿತು .ಆಮ್ ಆದ್ಮಿ ಪಾರ್ಟಿಯು ದೆಹಲಿ ಹಾಗೂ ಪಂಜಾಬ್‌ನಲ್ಲಿ ಪೌರ ಕಾರ್ಮಿಕರನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿದೆ. ಅನೇಕರನ್ನು ಶಾಸಕರನ್ನಾಗಿ ಮಾಡಿದೆ. ಈ ಮೂಲಕ ಪೌರ ಕಾರ್ಮಿಕರ ಭಾವನೆಗಳಿಗೆ ರಾಜಕೀಯ ಬಲ ದೊರಕಿಸಿ ಅವರ ಸಮಸ್ಯೆಗಳಿಗೂ ಪರಿಹಾರ ನೀಡಲು ಗಮನಹರಿಸಿದೆ. ಈ ನಿಟ್ಟಿನಲ್ಲಿ ಮಂಗಳೂರು ನಗರ ಪಾಲಿಕೆಯಲ್ಲೂ ಕಾರ್ಮಿಕರಿಗೆ ರಾಜಕೀಯ ಬಲ ನೀಡಲು ದ.ಕ ಆಮ್ ಆದ್ಮಿ ಪಕ್ಷ ಸದಾ ಸಿದ್ದವಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಕರ್ನಾಟಕದಲ್ಲಿನ ಆಡಳಿತಾರೂಢ ಬಿಜೆಪಿಗೆ ಪೌರ ಕಾರ್ಮಿಕರ ನೋವು ಕಾಣಿಸುತ್ತಿಲ್ಲ. ಅವರ ಸಮಸ್ಯೆಗೆ ಸ್ಪಂದಿಸುವ ಕನಿಷ್ಠ ಸೌಜನ್ಯವನ್ನು ತೋರಿಸಲಿಲ್ಲ. ಹೀಗಾಗಿ ಪೌರ ಕಾರ್ಮಿಕರು ಪದೇಪದೇ ಪ್ರತಿಭಟನೆ ನಡೆಸುತ್ತಿದ್ದರೂ ಗಮನಹರಿಸಿದ ಬಿಜೆಪಿ ನೇತೃತ್ವದ ಸರ್ಕಾರವು ಸಮಾಜದ ಪ್ರಮುಖ ಕಾರ್ಮಿಕರ ಸಮಸ್ಯೆಯನ್ನು ಕಡೆಗಣಿಸಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಪ್ರತಿಕ್ರಿಯಿಸಿದ್ದಾರೆ.

ಪ್ರತೀ ಊರಿನ  ಸ್ವಚ್ಛತೆ ಮತ್ತು ನೈರ್ಮಲ್ಯತೆಗಾಗಿ ಶ್ರಮಿಸುವ ಪೌರಕಾರ್ಮಿಕರಿಗೆ ಸರ್ಕಾರ ಸಮರ್ಪಕ ಅಗತ್ಯ ಸಲಕರಣೆಗಳನ್ನು ನೀಡಿಲ್ಲ. ನಿತ್ಯ ಕಾರ್ಯಕ್ಕೆ ಸುರಕ್ಷತಾ ಕವಚಗಳು, ನಿವೃತ್ತಿ ಸೇವಾ ಸೌಲಭ್ಯಗಳು, ಸಮಾನ ಕೆಲಸಕ್ಕೆ ಸಮಾನ ವೇತನ, ಅರೋಗ್ಯ ಸಮಸ್ಯೆಗಳಿಗೆ ಉತ್ತಮ ವೈದ್ಯಕೀಯ ಉಪಚಾರ, ಗ್ರಾಚ್ಯುಟಿ, ಹೆರಿಗೆ ಭತ್ಯೆ, ರಜಾ ದಿನಗಳನ್ನು ನೀಡಬೇಕು. ಅವರನ್ನು ನೇರ ನೇಮಕಾತಿ ಮಾಡಿಕೊಳ್ಳುವ ವ್ಯವಸ್ಥೆ ಜಾರಿಗೆ ಬರಬೇಕು. ಅಲ್ಲದೇ, ಅಗತ್ಯವಿರುವಲ್ಲಿ ಅವರಿಗಾಗಿ ಶೌಚಾಲಯ ನಿರ್ಮಾಣ ಮಾಡಬೇಕು. ಅವರಿಗೆ ರಜಾ ಸೌಲಭ್ಯ ನೀಡಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಹಣ ನೀಡಬೇಕು. ಇಂತಹ ವ್ಯವಸ್ಥೆ ಇಲ್ಲದೇ ತೊಂದರೆಗೀಡಾದ ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸುವತ್ತ ಗಮನ ನೀಡಬೇಕು ಎಂದು ಎಎಪಿ ಒತ್ತಾಯಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

17 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago