Advertisement
ಸುದ್ದಿಗಳು

ಮಂಗಳೂರು ಅಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ ಶಂಕೆ | ಚುರುಕುಗೊಂಡ ತನಿಖೆ |

Share

ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಸಂಭವಿಸಿದ ಸ್ಫೋಟದ ಹಿಂದೆ ಉಗ್ರರ ಕೈವಾಡದ ಶಂಕೆಯನ್ನು ಪೊಲೀಸ್‌ ಇಲಾಖೆ ವ್ಯಕ್ತಪಡಿಸಿದ್ದು, ತನಿಖೆ ಚರುಕುಗೊಳಿಸಿದೆ.

ಮಂಗಳೂರಿನ ನಾಗುರಿಯಲ್ಲಿ ಶನಿವಾರ ಸಂಜೆ ಸುಮಾರು 4.30 ರ ಸುಮಾರಿಗೆ  ಚಲಿಸುತ್ತಿದ್ದ  ಆಟೋ ರಿಕ್ಷಾದಲ್ಲಿ ದಿಢೀರ್ ನಿಗೂಢವಾಗಿ ಸ್ಫೋಟವಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು  ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಸ್ಫೋಟದಲ್ಲಿ ಆಟೋದ ಒಳಭಾಗದಲ್ಲಿ ಭಾರೀ ಪ್ರಮಾಣದ ಹಾನಿಯುಂಟಾಗಿದ್ದು, ಪ್ರಯಾಣಿಕ  ಮತ್ತು ಆಟೋ ಚಾಲಕ  ಗಾಯಗೊಂಡಿದ್ದರು.

ತನಿಖೆಯ ವೇಳೆ ಡಿಜಿಪಿ ಪ್ರವೀಣ್ ಸೂದ್‌ ಅವರು,  ಇದು ಉಗ್ರರ ಕೃತ್ಯ ಎಂದು ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದ್ದಾರೆ. ಪ್ರಕರಣ ಸಂಬಂಧ ಸ್ಪಷ್ಟ ಮಾಹಿತಿಗಳು ಲಭ್ಯವಾಗಿದ್ದು,ಇದು ಆಕಸ್ಮಿಕ ಸ್ಫೋಟವಲ್ಲ. ಇದೊಂದು ಭಯೋತ್ಪಾದಕ ಕೃತ್ಯವಾಗಿದೆ. ಸ್ಫೋಟದ ಸಂದರ್ಭದಲ್ಲಿ ಸುತ್ತಮುತ್ತಲೂ ಜನ ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ ರಾಜ್ಯ ಪೊಲೀಸರು ಈ ಬಗ್ಗೆ ಸೂಕ್ತ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಆಟೋ ರಿಕ್ಷಾದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಹಿಂದಿ ಭಾಷೆ ಮಾತನಾಡುತ್ತಿದ್ದ ಮಾಹಿತಿ ಗೊತ್ತಾಗಿದೆ. ನಿಗೂಢ ಸ್ಫೋಟಗೊಂಡ ಆಟೋದಲ್ಲಿ ಪರಿಶೀಲನೆ ವೇಳೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಆಟೋದಲ್ಲಿ ಎರಡು ಬ್ಯಾಟರಿ ನಟ್ಟು, ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿವೆ. ಎಫ್‌ಎಸ್‌ಎಲ್ ತಂಡ ವಶಕ್ಕೆ ಪಡೆದುಕೊಂಡ ವಸ್ತುಗಳನ್ನು ಪರೀಕ್ಷೆಗೆ ಒಳಪಡಿಸಿದೆ. ಆಟೋದಲ್ಲಿದ್ದ ಪ್ರಯಾಣಿಕನ ಬಗ್ಗೆ ಅನುಮಾನ ಹೆಚ್ಚಾಗಿದೆ.

ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಅಟೋ ಹತ್ತಿದ ವ್ಯಕ್ತಿ ತನ್ನನ್ನು ಪಂಪ್​​ವೆಲ್ ಸರ್ಕಲ್​​ಗೆ ಬಿಡಲು ಹೇಳಿದ್ದನೆಂದು ತಿಳಿದುಬಂದಿದೆ.

ಉಗ್ರರು ಮಂಗಳೂರು ನಗರದಲ್ಲಿಯೇ  ಸ್ಫೋಟಕ್ಕೆ ಸಂಚು ರೂಪಿಸಿದ್ದರಾ , ಟಾರ್ಗೆಟ್ ಮಾಡಿದ್ದ ಸ್ಥಳ ತಲುಪುವ ಮೊದಲೇ ಬಾಂಬ್ ಸ್ಫೋಟವಾಗಿರುವ ಸಾಧ್ಯತೆಗಳು ಇದೆಯೇ  ಅಥವಾ ಸಮಾಜದಲ್ಲಿಯ ಶಾಂತಿ ಕದಡುವ ಉದ್ದೇಶದಿಂದ ಲಘು ಸಾಮರ್ಥ್ಯದ ಬಾಂಬ್ ಸ್ಫೋಟಿಸಲಾಗಿದೆಯೇ ಎಂಬ ನೆಲೆಯಲ್ಲೂ ತನಿಖೆಗಳು ಆರಂಭವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

6 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

24 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago