ಆಮ್ ಆದ್ಮಿ ಪಕ್ಷದಿಂದ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ | ಒಂದು ವರ್ಷದೊಳಗೆ ಮಂಗಳೂರಿನಲ್ಲಿ ಎಎಪಿ ಹವಾ | ನಿವೃತ ನ್ಯಾಯಮೂರ್ತಿ ಮೈಕಲ್ ಎಫ್ ಸಲ್ದಾನ ಅಭಿಮತ |

October 2, 2022
10:56 PM

ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಶ್ರಯದಲ್ಲಿ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ ಕಾರ್ಯಕ್ರಮ  ಭಾನುವಾರ ಮಂಗಳೂರು ನಗರದ ಬಿಜೈ ಚರ್ಚ್ ಹಾಲ್ ನಲ್ಲಿ ಜರಗಿತು. ನೂತನ ಪೋರ್ಟಲನ್ನು ಬಾಂಬೆ ಮತ್ತು ಕರ್ನಾಟಕ ಹೈ ಕೋರ್ಟ್ ನ ನಿವೃತ ನ್ಯಾಯಮೂರ್ತಿ ಮೈಕಲ್ ಎಫ್ ಸಲ್ದಾನ ಬಿಡುಗಡೆಗೊಳಿಸಿದರು.

Advertisement
Advertisement

ಬಳಿಕ ಮಾತನಾಡಿದ ಅವರು ಇಂದು ಆರಂಭಗೊಂಡ ಈ ಪೋರ್ಟಲ್ ಒಂದು ವರ್ಷದೊಳಗೆ ಮಂಗಳೂರಿನಲ್ಲಿ ಸಂಚಲನ ತರಲಿದ್ದು, ಇಡೀ ದೇಶಕ್ಕೆ ಮಾದರಿಯಾಗಲಿದೆ. ಈ ಪೋರ್ಟಲ್ ಆಡಳಿತ ವ್ಯವಸ್ಥೆಯ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದು ಜನಪರ ಕೆಲಸ ಮಾಡಲು ಕಾರಣವಾಗುತ್ತದೆ ಎಂದರು. ಅರವಿಂದ್ ಕೇಜ್ರಿವಾಲ್ ಒಬ್ಬ ಹಾರ್ಡ್‌ಕೋರ್ ವೃತ್ತಿಪರ ವ್ಯಕ್ತಿ ಆಗಿದ್ದಾರೆ. ಅವರನ್ನು ನಾನು ಹತ್ತಿರದಿಂದ ಕಂಡಿದ್ದೇನೆ. ಅವರು ಮಾಹಿತಿ ಇಟ್ಟುಕೊಂಡು ಸಂಪೂರ್ಣ ಡೇಟಾದೊಂದಿಗೆ ಕಾರ್ಯನಿರ್ವಹಿಸುತ್ತಾರೆ. ಅಂತವರ ನೇತೃತ್ವದಲ್ಲಿರುವ ಪಕ್ಷದೊಂದಿಗೆ ಕೈಜೊಡಿಸುವುದು ತುಂಬಾ ಹೆಮ್ಮೆಯ ವಿಚಾರ. ಇಂದಿನ ಆಡಳಿತದಲ್ಲಿ ಪಕ್ಷಾಂತರ ವಿರೋಧಿ ಕಾನೂನು ಬಹಳಷ್ಟು ದುರ್ಬಳಕೆಯಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ 167 ಶಾಸಕರನ್ನು ಖರೀದಿಸಲಾಗಿದೆ ಮತ್ತು 6 ಕಡೆಗಳಲ್ಲಿ ಜನರು ಅಧಿಕಾರ ನೀಡಿದ ರಾಜ್ಯ ಸರ್ಕಾರಗಳನ್ನು ಬೀಳಿಸಲಾಗಿದೆ. ಇದರಿಂದ ದೇಶದ ಮೇಲೆ ತುಂಬಾ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು ನ್ಯಾಯಮೂರ್ತಿ ಮೈಕಲ್ ಎಫ್ ಸಲ್ದಾನ ಅವರು ಅಭಿಪ್ರಾಯ ಪಟ್ಟರು.

Advertisement

ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ ಕಾಮತ್  ಮಾತನಾಡಿ, ನಮ್ಮ ಪಕ್ಷ ಐದು ವಿಚಾರಗಳಿಗೆ ಹೆಚ್ಚು ಒತ್ತು ನೀಡುತ್ತದೆ. ಶಿಕ್ಷಣ, ಆರೋಗ್ಯ, ಭ್ರಷ್ಟಾಚಾರ ನಿರ್ಮೂಲನೆ, ಮೂಲ ಸೌಕರ್ಯಗಳ ವ್ಯವಸ್ಥೆಯನ್ನು ಕಲ್ಪಿಸುವುದು, ದೇಶಾಭಿಮಾನ.  ಈ ಪಂಚ ಸೂತ್ರ ನಮ್ಮ ಪಕ್ಷದ ಸಿದ್ದಾಂತವಾಗಿದೆ ಎಂದು ಹೇಳಿದರು.

Advertisement

ಕಾರ್ಯಕ್ರಮದಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆ ಹಾಗೂ ಪಾಲಿಕೆ ಚುನಾವಣೆಗೆ ಸಂಬಂಧ ಪಟ್ಟಂತೆ ಕೆಲವೊಂದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಯಿತು.

Advertisement
ಪೋರ್ಟಲ್‌ ರುವಾರಿ ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ

ವೇದಿಕೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ, ಆಮ್ ಆದ್ಮಿ ಪಕ್ಷದ ರಾಜ್ಯ ಜತೆ ಕಾರ್ಯದರ್ಶಿ ವಿವೇಕಾನಂದ ಸಲಿನ್ಸ‌, ಆಮ್ ಆದ್ಮಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಪುಚ್ಚಪಾಡಿ, ಮಹಿಳಾ ವಿಭಾಗದ ಅಧ್ಯಕ್ಷೆ ಬೆನೆಟ್ ನವಿತಾ ಮೊರಾಸ್ ಮುಂತಾದವರು ಉಪಸ್ಥಿತರಿದ್ದರು.

Advertisement

ಕಾರ್ಯಕ್ರಮದಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಂಚಾಲಕ ವಿಜಯನಾಥ ವಿಠ್ಠಲ ಶೆಟ್ಟಿ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಂಚಾಲಕ ವಿಶುಕುಮಾರ್, ಮಂಗಳೂರು ಉತ್ತರ ಕ್ಷೇತ್ರದ ಮುಖಂಡ ಸಂದೀಪ್ ಶೆಟ್ಟಿ, ದ.ಕ. ಜಿಲ್ಲಾ ಅಪ್ ಖಜಾಂಜಿ ಆವ್ರೆನ್ ಡಿಸೋಜಾ, ಕಚೇರಿ ಸಂಚಾಲಕ ರವಿಪ್ರಸಾದ, ಜತೆ ಕಾರ್ಯದರ್ಶಿ ಡೆಸ್ಮಂಡ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

ಸಂತೋಷ್ ಕಾಮತ್ ಅವರು ತನ್ನ ಗುರುಗಳಾದ ಎಂ. ಬಿ. ಪುರಾಣಿಕ್ ಹಾಗೂ ತಂದೆ ತಾಯಿಗಳಿಗೆ ಹೂ ನೀಡಿ ಗೌರವ ಸಲ್ಲಿಸಿದರು.‌

Advertisement

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಸಂಚಾಲಕ ಪ್ರಸಾದ್ ಬಜಿಲಕೇರಿ ಸ್ವಾಗತಿಸಿದರು. ಮಾಧ್ಯಮ ಸಂಚಾಲಕ ವೆಂಕಟೇಶ್ ಎನ್. ಬಾಳಿಗಾ ಮುಖ್ಯ ಅತಿಥಿಗಳ ಪರಿಚಯ ಪತ್ರ ಓದಿದರು. ಡೆಲನ್ ಲೋಬೋ ನಿರುಪಿಸಿದರು. ಬೆನೆಟ್ ನವಿತಾ ಮೊರಾಸ್ ವಂದಿಸಿದರು.

 

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror