ಮಳೆಗಾಲ | ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ ಮನವಿ | ಇಡೀ ಜಿಲ್ಲೆಗೂ ಅಗತ್ಯವಿದೆ ಈ ಮನವಿ |

May 17, 2022
9:54 PM
  • ಮಳೆಗೆ ಮುನ್ನೆಚ್ಚರಿಕೆ
  • ಮಂಗಳೂರುಮಹಾನಗರ ಪಾಲಿಕೆ ವ್ಯಾಪ್ತಿ ಮನವಿ
  • ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ
  • ಇಡೀ ಜಿಲ್ಲೆಗೂ ಈ ಮನವಿ ಅಗತ್ಯ

ಇದೇ ತಿಂಗಳ 17 ರಿಂದ 19ರ ವರೆಗೆ ಭಾರಿ ಮಳೆಯಾಗುವ ಸಂಭವವಿರುವುದರಿಂದ ಹಾಗೂ ಜೂನ್ ತಿಂಗಳಾರಂಭದಲ್ಲಿ ಮುಂಗಾರು ಪ್ರಾರಂಭವಾಗುವುದರಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ, ಮಳೆಗಾಲ ಪೂರ್ಣಗೊಂಡ ನಂತರ ಆ ಕಾಮಗಾರಿಗಳನ್ನು ಪ್ರಾರಂಭಿಸುವಂತೆ ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Advertisement
Advertisement

ಗುಡ್ಡ ಅಗೆದು ನಿವೇಶನ ಸಮತಟ್ಟು ಗೊಳಿಸುವುದರಿಂದ ಗುಡ್ಡ ಕುಸಿದು ಸಾರ್ವಜನಿಕರಿಗೆ ತೊಂದರೆಯಾಗಲಿದೆ, ಆದ ಕಾರಣ ಗುಡ್ಡ ಅಗೆದು ನಿವೇಶನವನ್ನು ಸಮತಟ್ಟುಗೊಳಿಸಿ ಮಣ್ಣು ಸಾಗಾಟ ಮಾಡುವುದನ್ನು ಈ ಸಂದರ್ಭದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಮುಖ್ಯವಾಗಿ ಈಗಾಗಲೇ ಆರಂಭಿಸಿರುವ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಅಕ್ಕಪಕ್ಕದ ನಿವೇಶನಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸುವುದು ಮತ್ತು ತಗ್ಗು ಪ್ರದೇಶವಿರುವ ಸಂದರ್ಭದಲ್ಲಿ ಯಾವುದೇ ಅನಾಹುತವಾಗದ ಹಾಗೆ ತಡೆಗೋಡೆ ನಿರ್ಮಿಸಿ ಸೂಕ್ತ ರೀತಿಯಲ್ಲಿ ಭದ್ರಪಡಿಸಬೇಕು, ತಪ್ಪಿದಲ್ಲಿ ಕೆ.ಎಂ.ಸಿ ಕಾಯ್ದೆಯಂತೆ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಡೀ ಜಿಲ್ಲೆಗೂ ಈ ಮನವಿ ಹೆಚ್ಚು ಸೂಕ್ತವಾಗಿದೆ. ಮಳೆ ಆರಂಭದ ವೇಳೆ ಹಾಗೂ ಜೋರಾದ ಮಳೆಯ ವೇಳೆ ಮಣ್ಣಿನ ಕಾಮಗಾರಿಗಳು ಇದುವರೆಗೂ ಹೆಚ್ಚು ಅಪಾಯವನ್ನು  ತಂದಿದೆ. ಮಣ್ಣು ಕುಸಿತ, ಗೋಡೆ ಕುಸಿತದಂತಹ ಘಟನೆಗಳು ಇದುವರೆಗೆ ನಡೆದಿರುವ ಹಿನ್ನೆಲೆಯಲ್ಲಿ  ಈ ಮುಂಜಾಗ್ರತಾ ಕ್ರಮ ಇಡೀ ಜಿಲ್ಲೆಯಲ್ಲೂ ಮುಂದಿನ ದಿನಗಳಲ್ಲಿ ಅನ್ವಯಿಸುವಂತೆ ಜಾರಿಯಾಗಬೇಕಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾಧನೆಗಿಂತ ದೊಡ್ಡದು ಸಂಯಮ
February 16, 2026
7:56 AM
by: ದ ರೂರಲ್ ಮಿರರ್.ಕಾಂ
ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ
February 16, 2026
7:34 AM
by: ದ ರೂರಲ್ ಮಿರರ್.ಕಾಂ
ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!
February 16, 2026
7:11 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror