ಮಳೆಗಾಲ | ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ ಮನವಿ | ಇಡೀ ಜಿಲ್ಲೆಗೂ ಅಗತ್ಯವಿದೆ ಈ ಮನವಿ |

May 17, 2022
9:54 PM
  • ಮಳೆಗೆ ಮುನ್ನೆಚ್ಚರಿಕೆ
  • ಮಂಗಳೂರುಮಹಾನಗರ ಪಾಲಿಕೆ ವ್ಯಾಪ್ತಿ ಮನವಿ
  • ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ
  • ಇಡೀ ಜಿಲ್ಲೆಗೂ ಈ ಮನವಿ ಅಗತ್ಯ

ಇದೇ ತಿಂಗಳ 17 ರಿಂದ 19ರ ವರೆಗೆ ಭಾರಿ ಮಳೆಯಾಗುವ ಸಂಭವವಿರುವುದರಿಂದ ಹಾಗೂ ಜೂನ್ ತಿಂಗಳಾರಂಭದಲ್ಲಿ ಮುಂಗಾರು ಪ್ರಾರಂಭವಾಗುವುದರಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ, ಮಳೆಗಾಲ ಪೂರ್ಣಗೊಂಡ ನಂತರ ಆ ಕಾಮಗಾರಿಗಳನ್ನು ಪ್ರಾರಂಭಿಸುವಂತೆ ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಗುಡ್ಡ ಅಗೆದು ನಿವೇಶನ ಸಮತಟ್ಟು ಗೊಳಿಸುವುದರಿಂದ ಗುಡ್ಡ ಕುಸಿದು ಸಾರ್ವಜನಿಕರಿಗೆ ತೊಂದರೆಯಾಗಲಿದೆ, ಆದ ಕಾರಣ ಗುಡ್ಡ ಅಗೆದು ನಿವೇಶನವನ್ನು ಸಮತಟ್ಟುಗೊಳಿಸಿ ಮಣ್ಣು ಸಾಗಾಟ ಮಾಡುವುದನ್ನು ಈ ಸಂದರ್ಭದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಮುಖ್ಯವಾಗಿ ಈಗಾಗಲೇ ಆರಂಭಿಸಿರುವ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಅಕ್ಕಪಕ್ಕದ ನಿವೇಶನಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸುವುದು ಮತ್ತು ತಗ್ಗು ಪ್ರದೇಶವಿರುವ ಸಂದರ್ಭದಲ್ಲಿ ಯಾವುದೇ ಅನಾಹುತವಾಗದ ಹಾಗೆ ತಡೆಗೋಡೆ ನಿರ್ಮಿಸಿ ಸೂಕ್ತ ರೀತಿಯಲ್ಲಿ ಭದ್ರಪಡಿಸಬೇಕು, ತಪ್ಪಿದಲ್ಲಿ ಕೆ.ಎಂ.ಸಿ ಕಾಯ್ದೆಯಂತೆ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಡೀ ಜಿಲ್ಲೆಗೂ ಈ ಮನವಿ ಹೆಚ್ಚು ಸೂಕ್ತವಾಗಿದೆ. ಮಳೆ ಆರಂಭದ ವೇಳೆ ಹಾಗೂ ಜೋರಾದ ಮಳೆಯ ವೇಳೆ ಮಣ್ಣಿನ ಕಾಮಗಾರಿಗಳು ಇದುವರೆಗೂ ಹೆಚ್ಚು ಅಪಾಯವನ್ನು  ತಂದಿದೆ. ಮಣ್ಣು ಕುಸಿತ, ಗೋಡೆ ಕುಸಿತದಂತಹ ಘಟನೆಗಳು ಇದುವರೆಗೆ ನಡೆದಿರುವ ಹಿನ್ನೆಲೆಯಲ್ಲಿ  ಈ ಮುಂಜಾಗ್ರತಾ ಕ್ರಮ ಇಡೀ ಜಿಲ್ಲೆಯಲ್ಲೂ ಮುಂದಿನ ದಿನಗಳಲ್ಲಿ ಅನ್ವಯಿಸುವಂತೆ ಜಾರಿಯಾಗಬೇಕಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror