ಇದೇ ತಿಂಗಳ 17 ರಿಂದ 19ರ ವರೆಗೆ ಭಾರಿ ಮಳೆಯಾಗುವ ಸಂಭವವಿರುವುದರಿಂದ ಹಾಗೂ ಜೂನ್ ತಿಂಗಳಾರಂಭದಲ್ಲಿ ಮುಂಗಾರು ಪ್ರಾರಂಭವಾಗುವುದರಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ, ಮಳೆಗಾಲ ಪೂರ್ಣಗೊಂಡ ನಂತರ ಆ ಕಾಮಗಾರಿಗಳನ್ನು ಪ್ರಾರಂಭಿಸುವಂತೆ ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಗುಡ್ಡ ಅಗೆದು ನಿವೇಶನ ಸಮತಟ್ಟು ಗೊಳಿಸುವುದರಿಂದ ಗುಡ್ಡ ಕುಸಿದು ಸಾರ್ವಜನಿಕರಿಗೆ ತೊಂದರೆಯಾಗಲಿದೆ, ಆದ ಕಾರಣ ಗುಡ್ಡ ಅಗೆದು ನಿವೇಶನವನ್ನು ಸಮತಟ್ಟುಗೊಳಿಸಿ ಮಣ್ಣು ಸಾಗಾಟ ಮಾಡುವುದನ್ನು ಈ ಸಂದರ್ಭದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಮುಖ್ಯವಾಗಿ ಈಗಾಗಲೇ ಆರಂಭಿಸಿರುವ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಅಕ್ಕಪಕ್ಕದ ನಿವೇಶನಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸುವುದು ಮತ್ತು ತಗ್ಗು ಪ್ರದೇಶವಿರುವ ಸಂದರ್ಭದಲ್ಲಿ ಯಾವುದೇ ಅನಾಹುತವಾಗದ ಹಾಗೆ ತಡೆಗೋಡೆ ನಿರ್ಮಿಸಿ ಸೂಕ್ತ ರೀತಿಯಲ್ಲಿ ಭದ್ರಪಡಿಸಬೇಕು, ತಪ್ಪಿದಲ್ಲಿ ಕೆ.ಎಂ.ಸಿ ಕಾಯ್ದೆಯಂತೆ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಡೀ ಜಿಲ್ಲೆಗೂ ಈ ಮನವಿ ಹೆಚ್ಚು ಸೂಕ್ತವಾಗಿದೆ. ಮಳೆ ಆರಂಭದ ವೇಳೆ ಹಾಗೂ ಜೋರಾದ ಮಳೆಯ ವೇಳೆ ಮಣ್ಣಿನ ಕಾಮಗಾರಿಗಳು ಇದುವರೆಗೂ ಹೆಚ್ಚು ಅಪಾಯವನ್ನು ತಂದಿದೆ. ಮಣ್ಣು ಕುಸಿತ, ಗೋಡೆ ಕುಸಿತದಂತಹ ಘಟನೆಗಳು ಇದುವರೆಗೆ ನಡೆದಿರುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಇಡೀ ಜಿಲ್ಲೆಯಲ್ಲೂ ಮುಂದಿನ ದಿನಗಳಲ್ಲಿ ಅನ್ವಯಿಸುವಂತೆ ಜಾರಿಯಾಗಬೇಕಿದೆ.
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…