ಇದೇ ತಿಂಗಳ 17 ರಿಂದ 19ರ ವರೆಗೆ ಭಾರಿ ಮಳೆಯಾಗುವ ಸಂಭವವಿರುವುದರಿಂದ ಹಾಗೂ ಜೂನ್ ತಿಂಗಳಾರಂಭದಲ್ಲಿ ಮುಂಗಾರು ಪ್ರಾರಂಭವಾಗುವುದರಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ, ಮಳೆಗಾಲ ಪೂರ್ಣಗೊಂಡ ನಂತರ ಆ ಕಾಮಗಾರಿಗಳನ್ನು ಪ್ರಾರಂಭಿಸುವಂತೆ ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಗುಡ್ಡ ಅಗೆದು ನಿವೇಶನ ಸಮತಟ್ಟು ಗೊಳಿಸುವುದರಿಂದ ಗುಡ್ಡ ಕುಸಿದು ಸಾರ್ವಜನಿಕರಿಗೆ ತೊಂದರೆಯಾಗಲಿದೆ, ಆದ ಕಾರಣ ಗುಡ್ಡ ಅಗೆದು ನಿವೇಶನವನ್ನು ಸಮತಟ್ಟುಗೊಳಿಸಿ ಮಣ್ಣು ಸಾಗಾಟ ಮಾಡುವುದನ್ನು ಈ ಸಂದರ್ಭದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಮುಖ್ಯವಾಗಿ ಈಗಾಗಲೇ ಆರಂಭಿಸಿರುವ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಅಕ್ಕಪಕ್ಕದ ನಿವೇಶನಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸುವುದು ಮತ್ತು ತಗ್ಗು ಪ್ರದೇಶವಿರುವ ಸಂದರ್ಭದಲ್ಲಿ ಯಾವುದೇ ಅನಾಹುತವಾಗದ ಹಾಗೆ ತಡೆಗೋಡೆ ನಿರ್ಮಿಸಿ ಸೂಕ್ತ ರೀತಿಯಲ್ಲಿ ಭದ್ರಪಡಿಸಬೇಕು, ತಪ್ಪಿದಲ್ಲಿ ಕೆ.ಎಂ.ಸಿ ಕಾಯ್ದೆಯಂತೆ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಡೀ ಜಿಲ್ಲೆಗೂ ಈ ಮನವಿ ಹೆಚ್ಚು ಸೂಕ್ತವಾಗಿದೆ. ಮಳೆ ಆರಂಭದ ವೇಳೆ ಹಾಗೂ ಜೋರಾದ ಮಳೆಯ ವೇಳೆ ಮಣ್ಣಿನ ಕಾಮಗಾರಿಗಳು ಇದುವರೆಗೂ ಹೆಚ್ಚು ಅಪಾಯವನ್ನು ತಂದಿದೆ. ಮಣ್ಣು ಕುಸಿತ, ಗೋಡೆ ಕುಸಿತದಂತಹ ಘಟನೆಗಳು ಇದುವರೆಗೆ ನಡೆದಿರುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಇಡೀ ಜಿಲ್ಲೆಯಲ್ಲೂ ಮುಂದಿನ ದಿನಗಳಲ್ಲಿ ಅನ್ವಯಿಸುವಂತೆ ಜಾರಿಯಾಗಬೇಕಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…