Advertisement
ಸುದ್ದಿಗಳು

ಮಳೆಗಾಲ | ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ ಮನವಿ | ಇಡೀ ಜಿಲ್ಲೆಗೂ ಅಗತ್ಯವಿದೆ ಈ ಮನವಿ |

Share
  • ಮಳೆಗೆ ಮುನ್ನೆಚ್ಚರಿಕೆ
  • ಮಂಗಳೂರುಮಹಾನಗರ ಪಾಲಿಕೆ ವ್ಯಾಪ್ತಿ ಮನವಿ
  • ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ
  • ಇಡೀ ಜಿಲ್ಲೆಗೂ ಈ ಮನವಿ ಅಗತ್ಯ

ಇದೇ ತಿಂಗಳ 17 ರಿಂದ 19ರ ವರೆಗೆ ಭಾರಿ ಮಳೆಯಾಗುವ ಸಂಭವವಿರುವುದರಿಂದ ಹಾಗೂ ಜೂನ್ ತಿಂಗಳಾರಂಭದಲ್ಲಿ ಮುಂಗಾರು ಪ್ರಾರಂಭವಾಗುವುದರಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ, ಮಳೆಗಾಲ ಪೂರ್ಣಗೊಂಡ ನಂತರ ಆ ಕಾಮಗಾರಿಗಳನ್ನು ಪ್ರಾರಂಭಿಸುವಂತೆ ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಗುಡ್ಡ ಅಗೆದು ನಿವೇಶನ ಸಮತಟ್ಟು ಗೊಳಿಸುವುದರಿಂದ ಗುಡ್ಡ ಕುಸಿದು ಸಾರ್ವಜನಿಕರಿಗೆ ತೊಂದರೆಯಾಗಲಿದೆ, ಆದ ಕಾರಣ ಗುಡ್ಡ ಅಗೆದು ನಿವೇಶನವನ್ನು ಸಮತಟ್ಟುಗೊಳಿಸಿ ಮಣ್ಣು ಸಾಗಾಟ ಮಾಡುವುದನ್ನು ಈ ಸಂದರ್ಭದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಮುಖ್ಯವಾಗಿ ಈಗಾಗಲೇ ಆರಂಭಿಸಿರುವ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಅಕ್ಕಪಕ್ಕದ ನಿವೇಶನಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸುವುದು ಮತ್ತು ತಗ್ಗು ಪ್ರದೇಶವಿರುವ ಸಂದರ್ಭದಲ್ಲಿ ಯಾವುದೇ ಅನಾಹುತವಾಗದ ಹಾಗೆ ತಡೆಗೋಡೆ ನಿರ್ಮಿಸಿ ಸೂಕ್ತ ರೀತಿಯಲ್ಲಿ ಭದ್ರಪಡಿಸಬೇಕು, ತಪ್ಪಿದಲ್ಲಿ ಕೆ.ಎಂ.ಸಿ ಕಾಯ್ದೆಯಂತೆ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಡೀ ಜಿಲ್ಲೆಗೂ ಈ ಮನವಿ ಹೆಚ್ಚು ಸೂಕ್ತವಾಗಿದೆ. ಮಳೆ ಆರಂಭದ ವೇಳೆ ಹಾಗೂ ಜೋರಾದ ಮಳೆಯ ವೇಳೆ ಮಣ್ಣಿನ ಕಾಮಗಾರಿಗಳು ಇದುವರೆಗೂ ಹೆಚ್ಚು ಅಪಾಯವನ್ನು  ತಂದಿದೆ. ಮಣ್ಣು ಕುಸಿತ, ಗೋಡೆ ಕುಸಿತದಂತಹ ಘಟನೆಗಳು ಇದುವರೆಗೆ ನಡೆದಿರುವ ಹಿನ್ನೆಲೆಯಲ್ಲಿ  ಈ ಮುಂಜಾಗ್ರತಾ ಕ್ರಮ ಇಡೀ ಜಿಲ್ಲೆಯಲ್ಲೂ ಮುಂದಿನ ದಿನಗಳಲ್ಲಿ ಅನ್ವಯಿಸುವಂತೆ ಜಾರಿಯಾಗಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

1 day ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

1 day ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

3 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

4 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

4 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

5 days ago