ಇದೇ ತಿಂಗಳ 17 ರಿಂದ 19ರ ವರೆಗೆ ಭಾರಿ ಮಳೆಯಾಗುವ ಸಂಭವವಿರುವುದರಿಂದ ಹಾಗೂ ಜೂನ್ ತಿಂಗಳಾರಂಭದಲ್ಲಿ ಮುಂಗಾರು ಪ್ರಾರಂಭವಾಗುವುದರಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ, ಮಳೆಗಾಲ ಪೂರ್ಣಗೊಂಡ ನಂತರ ಆ ಕಾಮಗಾರಿಗಳನ್ನು ಪ್ರಾರಂಭಿಸುವಂತೆ ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಗುಡ್ಡ ಅಗೆದು ನಿವೇಶನ ಸಮತಟ್ಟು ಗೊಳಿಸುವುದರಿಂದ ಗುಡ್ಡ ಕುಸಿದು ಸಾರ್ವಜನಿಕರಿಗೆ ತೊಂದರೆಯಾಗಲಿದೆ, ಆದ ಕಾರಣ ಗುಡ್ಡ ಅಗೆದು ನಿವೇಶನವನ್ನು ಸಮತಟ್ಟುಗೊಳಿಸಿ ಮಣ್ಣು ಸಾಗಾಟ ಮಾಡುವುದನ್ನು ಈ ಸಂದರ್ಭದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಮುಖ್ಯವಾಗಿ ಈಗಾಗಲೇ ಆರಂಭಿಸಿರುವ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಅಕ್ಕಪಕ್ಕದ ನಿವೇಶನಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸುವುದು ಮತ್ತು ತಗ್ಗು ಪ್ರದೇಶವಿರುವ ಸಂದರ್ಭದಲ್ಲಿ ಯಾವುದೇ ಅನಾಹುತವಾಗದ ಹಾಗೆ ತಡೆಗೋಡೆ ನಿರ್ಮಿಸಿ ಸೂಕ್ತ ರೀತಿಯಲ್ಲಿ ಭದ್ರಪಡಿಸಬೇಕು, ತಪ್ಪಿದಲ್ಲಿ ಕೆ.ಎಂ.ಸಿ ಕಾಯ್ದೆಯಂತೆ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಡೀ ಜಿಲ್ಲೆಗೂ ಈ ಮನವಿ ಹೆಚ್ಚು ಸೂಕ್ತವಾಗಿದೆ. ಮಳೆ ಆರಂಭದ ವೇಳೆ ಹಾಗೂ ಜೋರಾದ ಮಳೆಯ ವೇಳೆ ಮಣ್ಣಿನ ಕಾಮಗಾರಿಗಳು ಇದುವರೆಗೂ ಹೆಚ್ಚು ಅಪಾಯವನ್ನು ತಂದಿದೆ. ಮಣ್ಣು ಕುಸಿತ, ಗೋಡೆ ಕುಸಿತದಂತಹ ಘಟನೆಗಳು ಇದುವರೆಗೆ ನಡೆದಿರುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಇಡೀ ಜಿಲ್ಲೆಯಲ್ಲೂ ಮುಂದಿನ ದಿನಗಳಲ್ಲಿ ಅನ್ವಯಿಸುವಂತೆ ಜಾರಿಯಾಗಬೇಕಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…