ಇದೇ ತಿಂಗಳ 17 ರಿಂದ 19ರ ವರೆಗೆ ಭಾರಿ ಮಳೆಯಾಗುವ ಸಂಭವವಿರುವುದರಿಂದ ಹಾಗೂ ಜೂನ್ ತಿಂಗಳಾರಂಭದಲ್ಲಿ ಮುಂಗಾರು ಪ್ರಾರಂಭವಾಗುವುದರಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ, ಮಳೆಗಾಲ ಪೂರ್ಣಗೊಂಡ ನಂತರ ಆ ಕಾಮಗಾರಿಗಳನ್ನು ಪ್ರಾರಂಭಿಸುವಂತೆ ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಗುಡ್ಡ ಅಗೆದು ನಿವೇಶನ ಸಮತಟ್ಟು ಗೊಳಿಸುವುದರಿಂದ ಗುಡ್ಡ ಕುಸಿದು ಸಾರ್ವಜನಿಕರಿಗೆ ತೊಂದರೆಯಾಗಲಿದೆ, ಆದ ಕಾರಣ ಗುಡ್ಡ ಅಗೆದು ನಿವೇಶನವನ್ನು ಸಮತಟ್ಟುಗೊಳಿಸಿ ಮಣ್ಣು ಸಾಗಾಟ ಮಾಡುವುದನ್ನು ಈ ಸಂದರ್ಭದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಮುಖ್ಯವಾಗಿ ಈಗಾಗಲೇ ಆರಂಭಿಸಿರುವ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಅಕ್ಕಪಕ್ಕದ ನಿವೇಶನಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸುವುದು ಮತ್ತು ತಗ್ಗು ಪ್ರದೇಶವಿರುವ ಸಂದರ್ಭದಲ್ಲಿ ಯಾವುದೇ ಅನಾಹುತವಾಗದ ಹಾಗೆ ತಡೆಗೋಡೆ ನಿರ್ಮಿಸಿ ಸೂಕ್ತ ರೀತಿಯಲ್ಲಿ ಭದ್ರಪಡಿಸಬೇಕು, ತಪ್ಪಿದಲ್ಲಿ ಕೆ.ಎಂ.ಸಿ ಕಾಯ್ದೆಯಂತೆ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಡೀ ಜಿಲ್ಲೆಗೂ ಈ ಮನವಿ ಹೆಚ್ಚು ಸೂಕ್ತವಾಗಿದೆ. ಮಳೆ ಆರಂಭದ ವೇಳೆ ಹಾಗೂ ಜೋರಾದ ಮಳೆಯ ವೇಳೆ ಮಣ್ಣಿನ ಕಾಮಗಾರಿಗಳು ಇದುವರೆಗೂ ಹೆಚ್ಚು ಅಪಾಯವನ್ನು ತಂದಿದೆ. ಮಣ್ಣು ಕುಸಿತ, ಗೋಡೆ ಕುಸಿತದಂತಹ ಘಟನೆಗಳು ಇದುವರೆಗೆ ನಡೆದಿರುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಇಡೀ ಜಿಲ್ಲೆಯಲ್ಲೂ ಮುಂದಿನ ದಿನಗಳಲ್ಲಿ ಅನ್ವಯಿಸುವಂತೆ ಜಾರಿಯಾಗಬೇಕಿದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…