ದ ಕ ಜಿಲ್ಲೆ| ದ್ವೇಷ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್‌ ಹಾಕುವವರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗಳು ಸೂಚನೆ |

August 19, 2022
10:39 PM

ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಹಾಕುವ, ಅನಧಿಕೃತ ಸ್ಥಳಗಳಲ್ಲಿ ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಹಾಕುವ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು.

Advertisement
Advertisement

ಶುಕ್ರವಾರ ಮಂಗಳೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಮರಳುಗಾರಿಕೆ ತಡೆ, ಅನಧಿಕೃತ ಫ್ಲಾಕ್ಸ್ ತೆರವು ಹಾಗೂ ಹಬ್ಬ ಹರಿದಿನಗಳಲ್ಲಿ ಡಿಜೆ ಹಾಗೂ ದ್ವನಿವರ್ಧಕಗಳ ಬಳಕೆಯ ಬಗ್ಗೆ  ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿವಾದಾತ್ಮಕ ಅಥವಾ ದ್ವೇಷ ಸಾರುವ ಸಂದೇಶದ ಫ್ಲೆಕ್ಸ್ ಗಳು ಕಂಡುಬಂದ ಕೂಡಲೇ ಅವುಗಳನ್ನು ಸಂಬಂಧಿಸಿದ ಸ್ಥಳದ ಅಧಿಕಾರಿಗಳು ತೆರವುಗೊಳಿಸಬೇಕು, ಇಲ್ಲಿ ಪೊಲೀಸರ ಸಹಕಾರ ಪಡೆಯಬೇಕು ಹಾಗೂ ಅಧಿಕೃತ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಹಾಗೂ ಅದನ್ನು ಮುದ್ರಿಸಿದವರ ವಿವರ ಅದರಲ್ಲಿರಬೇಕು. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು, ನಿಟ್ಟಿನಲ್ಲಿ ಫ್ಲೆಕ್ಸ್ ಪ್ರಿಂಟರ್ ಗಳ ಸಭೆ ಕರೆಯಲಾಗುವುದು ಎಂದರು.

ಹೈಕೋರ್ಟ್‍ನ ಆದೇಶ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ವಯ ಡಿಜೆ ಸೆಟ್ ಹಾಗೂ ಧ್ವನಿವರ್ಧಕಗಳನ್ನು ಬಳಸಬೇಕು. ಈ ಬಗ್ಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಿಭಾಯಿಸಬೇಕಾದ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಅವುಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror