ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಹಾಕುವ, ಅನಧಿಕೃತ ಸ್ಥಳಗಳಲ್ಲಿ ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಹಾಕುವ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು.
ಶುಕ್ರವಾರ ಮಂಗಳೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಮರಳುಗಾರಿಕೆ ತಡೆ, ಅನಧಿಕೃತ ಫ್ಲಾಕ್ಸ್ ತೆರವು ಹಾಗೂ ಹಬ್ಬ ಹರಿದಿನಗಳಲ್ಲಿ ಡಿಜೆ ಹಾಗೂ ದ್ವನಿವರ್ಧಕಗಳ ಬಳಕೆಯ ಬಗ್ಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಾದಾತ್ಮಕ ಅಥವಾ ದ್ವೇಷ ಸಾರುವ ಸಂದೇಶದ ಫ್ಲೆಕ್ಸ್ ಗಳು ಕಂಡುಬಂದ ಕೂಡಲೇ ಅವುಗಳನ್ನು ಸಂಬಂಧಿಸಿದ ಸ್ಥಳದ ಅಧಿಕಾರಿಗಳು ತೆರವುಗೊಳಿಸಬೇಕು, ಇಲ್ಲಿ ಪೊಲೀಸರ ಸಹಕಾರ ಪಡೆಯಬೇಕು ಹಾಗೂ ಅಧಿಕೃತ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಹಾಗೂ ಅದನ್ನು ಮುದ್ರಿಸಿದವರ ವಿವರ ಅದರಲ್ಲಿರಬೇಕು. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು, ನಿಟ್ಟಿನಲ್ಲಿ ಫ್ಲೆಕ್ಸ್ ಪ್ರಿಂಟರ್ ಗಳ ಸಭೆ ಕರೆಯಲಾಗುವುದು ಎಂದರು.
ಹೈಕೋರ್ಟ್ನ ಆದೇಶ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ವಯ ಡಿಜೆ ಸೆಟ್ ಹಾಗೂ ಧ್ವನಿವರ್ಧಕಗಳನ್ನು ಬಳಸಬೇಕು. ಈ ಬಗ್ಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಿಭಾಯಿಸಬೇಕಾದ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಅವುಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…