Advertisement
ಸುದ್ದಿಗಳು

ದ ಕ ಜಿಲ್ಲೆ| ದ್ವೇಷ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್‌ ಹಾಕುವವರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗಳು ಸೂಚನೆ |

Share

ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಹಾಕುವ, ಅನಧಿಕೃತ ಸ್ಥಳಗಳಲ್ಲಿ ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಹಾಕುವ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು.

ಶುಕ್ರವಾರ ಮಂಗಳೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಮರಳುಗಾರಿಕೆ ತಡೆ, ಅನಧಿಕೃತ ಫ್ಲಾಕ್ಸ್ ತೆರವು ಹಾಗೂ ಹಬ್ಬ ಹರಿದಿನಗಳಲ್ಲಿ ಡಿಜೆ ಹಾಗೂ ದ್ವನಿವರ್ಧಕಗಳ ಬಳಕೆಯ ಬಗ್ಗೆ  ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿವಾದಾತ್ಮಕ ಅಥವಾ ದ್ವೇಷ ಸಾರುವ ಸಂದೇಶದ ಫ್ಲೆಕ್ಸ್ ಗಳು ಕಂಡುಬಂದ ಕೂಡಲೇ ಅವುಗಳನ್ನು ಸಂಬಂಧಿಸಿದ ಸ್ಥಳದ ಅಧಿಕಾರಿಗಳು ತೆರವುಗೊಳಿಸಬೇಕು, ಇಲ್ಲಿ ಪೊಲೀಸರ ಸಹಕಾರ ಪಡೆಯಬೇಕು ಹಾಗೂ ಅಧಿಕೃತ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಹಾಗೂ ಅದನ್ನು ಮುದ್ರಿಸಿದವರ ವಿವರ ಅದರಲ್ಲಿರಬೇಕು. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು, ನಿಟ್ಟಿನಲ್ಲಿ ಫ್ಲೆಕ್ಸ್ ಪ್ರಿಂಟರ್ ಗಳ ಸಭೆ ಕರೆಯಲಾಗುವುದು ಎಂದರು.

ಹೈಕೋರ್ಟ್‍ನ ಆದೇಶ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ವಯ ಡಿಜೆ ಸೆಟ್ ಹಾಗೂ ಧ್ವನಿವರ್ಧಕಗಳನ್ನು ಬಳಸಬೇಕು. ಈ ಬಗ್ಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಿಭಾಯಿಸಬೇಕಾದ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಅವುಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

8 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

10 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

17 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

24 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago