ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಹಾಕುವ, ಅನಧಿಕೃತ ಸ್ಥಳಗಳಲ್ಲಿ ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಹಾಕುವ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು.
ಶುಕ್ರವಾರ ಮಂಗಳೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಮರಳುಗಾರಿಕೆ ತಡೆ, ಅನಧಿಕೃತ ಫ್ಲಾಕ್ಸ್ ತೆರವು ಹಾಗೂ ಹಬ್ಬ ಹರಿದಿನಗಳಲ್ಲಿ ಡಿಜೆ ಹಾಗೂ ದ್ವನಿವರ್ಧಕಗಳ ಬಳಕೆಯ ಬಗ್ಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಾದಾತ್ಮಕ ಅಥವಾ ದ್ವೇಷ ಸಾರುವ ಸಂದೇಶದ ಫ್ಲೆಕ್ಸ್ ಗಳು ಕಂಡುಬಂದ ಕೂಡಲೇ ಅವುಗಳನ್ನು ಸಂಬಂಧಿಸಿದ ಸ್ಥಳದ ಅಧಿಕಾರಿಗಳು ತೆರವುಗೊಳಿಸಬೇಕು, ಇಲ್ಲಿ ಪೊಲೀಸರ ಸಹಕಾರ ಪಡೆಯಬೇಕು ಹಾಗೂ ಅಧಿಕೃತ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಹಾಗೂ ಅದನ್ನು ಮುದ್ರಿಸಿದವರ ವಿವರ ಅದರಲ್ಲಿರಬೇಕು. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು, ನಿಟ್ಟಿನಲ್ಲಿ ಫ್ಲೆಕ್ಸ್ ಪ್ರಿಂಟರ್ ಗಳ ಸಭೆ ಕರೆಯಲಾಗುವುದು ಎಂದರು.
ಹೈಕೋರ್ಟ್ನ ಆದೇಶ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ವಯ ಡಿಜೆ ಸೆಟ್ ಹಾಗೂ ಧ್ವನಿವರ್ಧಕಗಳನ್ನು ಬಳಸಬೇಕು. ಈ ಬಗ್ಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಿಭಾಯಿಸಬೇಕಾದ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಅವುಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…