Advertisement
ಸುದ್ದಿಗಳು

ದ ಕ ಜಿಲ್ಲೆ| ದ್ವೇಷ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್‌ ಹಾಕುವವರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗಳು ಸೂಚನೆ |

Share

ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಹಾಕುವ, ಅನಧಿಕೃತ ಸ್ಥಳಗಳಲ್ಲಿ ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಹಾಕುವ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು.

ಶುಕ್ರವಾರ ಮಂಗಳೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಮರಳುಗಾರಿಕೆ ತಡೆ, ಅನಧಿಕೃತ ಫ್ಲಾಕ್ಸ್ ತೆರವು ಹಾಗೂ ಹಬ್ಬ ಹರಿದಿನಗಳಲ್ಲಿ ಡಿಜೆ ಹಾಗೂ ದ್ವನಿವರ್ಧಕಗಳ ಬಳಕೆಯ ಬಗ್ಗೆ  ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿವಾದಾತ್ಮಕ ಅಥವಾ ದ್ವೇಷ ಸಾರುವ ಸಂದೇಶದ ಫ್ಲೆಕ್ಸ್ ಗಳು ಕಂಡುಬಂದ ಕೂಡಲೇ ಅವುಗಳನ್ನು ಸಂಬಂಧಿಸಿದ ಸ್ಥಳದ ಅಧಿಕಾರಿಗಳು ತೆರವುಗೊಳಿಸಬೇಕು, ಇಲ್ಲಿ ಪೊಲೀಸರ ಸಹಕಾರ ಪಡೆಯಬೇಕು ಹಾಗೂ ಅಧಿಕೃತ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಹಾಗೂ ಅದನ್ನು ಮುದ್ರಿಸಿದವರ ವಿವರ ಅದರಲ್ಲಿರಬೇಕು. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು, ನಿಟ್ಟಿನಲ್ಲಿ ಫ್ಲೆಕ್ಸ್ ಪ್ರಿಂಟರ್ ಗಳ ಸಭೆ ಕರೆಯಲಾಗುವುದು ಎಂದರು.

ಹೈಕೋರ್ಟ್‍ನ ಆದೇಶ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ವಯ ಡಿಜೆ ಸೆಟ್ ಹಾಗೂ ಧ್ವನಿವರ್ಧಕಗಳನ್ನು ಬಳಸಬೇಕು. ಈ ಬಗ್ಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಿಭಾಯಿಸಬೇಕಾದ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಅವುಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

22 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

23 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

24 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 days ago