ಇತ್ತೀಚಿನ ದಿನಗಳಲ್ಲಿ ಸಮುದ್ರ ಮೀನು(sea Fish) ಬೆಲೆ ಗಗನಕ್ಕೇರಿದ(Price hike) ಹಿನ್ನೆಲೆ ಮತ್ಸ್ಯ ಪ್ರಿಯರು ಕೆರೆ ಮೀನುಗಳ(Lake Fish) ಮೊರೆ ಹೋಗುತ್ತಿದ್ದಾರೆ. ಹಾಗೆ ಮೀನು ಸಾಕಾಣಿಕೆ ಕೂಡ ಉದ್ಯಮವಾಗಿ(Business) ಬೆಳೆಯುತ್ತಿದೆ. ಅನೇಕ ರೈತರು ಮೀನು ಸಾಕಾಣಿಕೆಯನ್ನು(Fishery) ಉಪ ಕಸುಬನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಹೆಚ್ಚಿನ ಕಡೆಗಳನ್ನು ಕೆರೆ ಮೀನು ಮಾರಾಟ ನಡೆಯುತ್ತದೆ. ಅಲ್ಲದೆ ಸಮುದ್ರ ಮೀನುಗಾರಿಕೆಗೆ ಜೂನ್ ಹಾಗೂ ಜುಲೈ ತಿಂಗಳಿನಲ್ಲಿ ಬಿಡುವ ನೀಡುವ ಕಾರಣ ತಾಜಾ ಮೀನು ಸಿಗುವುದಿಲ್ಲ. ಹಾಗಾಗಿ ಹೆಚ್ಚಿನ ಜನತೆ ಕೆರೆ ಮೀನು ಕಡೆ ಒಲವು ತೋರುತ್ತಾರೆ. ಅದರಲ್ಲೂ ಜೀವಂತವಿರುವ ಮೀನುಗಳಿಗೆ ಸ್ವಲ್ಪ ಹೆಚ್ಚೇ ಡಿಮ್ಯಾಂಡ್ . ಮಳೆಗಾಲದಲ್ಲಿ ಹೀಗೆ ತಾಜಾ ಮೀನುಗಳು (Fresh Fish) ಸಿಗೋದೆ ಖುಷಿ. ಮಂಗಳೂರಿನ ಸರಕಾರಿ ಪ್ರಾಯೋಜಿತ ಮೀನು ಮಾರಾಟ ಉತ್ಸವದಲ್ಲಿ ತಾಜಾ ಮೀನುಗಳ ಭರ್ಜರಿ ಮಾರಾಟ ನಡೆಯಿತು.
ಮತ್ಸ್ಯ ಬೇಟೆ : ಮಂಗಳೂರಿನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಮೀನುಗಾರಿಕಾ ಇಲಾಖೆಯ ಜಂಟಿ ಆಶ್ರಯದಲ್ಲಿ ಪಿಲಿಕುಳದ ಲೇಕ್ ಗಾರ್ಡನ್ ಕೆರೆಯಲ್ಲಿ ಮತ್ಸ್ಯಬೇಟೆ ನಡೆಯಿತು. ಹಿಡಿದ ತಾಜಾ ಮೀನುಗಳನ್ನು ಅಲ್ಲಿಯೇ ಮಾರಾಟ ಮಾಡಲಾಯಿತು. ರೋಹ್, ಕಾಟ್ಲ, ತಿಲೇಪಿಯಾ, ಮುಗುಡು ಹಾಗೂ ಗೌರಿ ಮೀನುಗಳು ಇಲ್ಲಿ ಲಭ್ಯವಿತ್ತು. ಕೆಜಿಗೆ 150ರೂಪಾಯಿನಂತೆ ಮೀನುಗಳ ಮಾರಾಟವಾದವು. ಖರೀದಿಸಿರುವ ಮೀನುಗಳನ್ನು ತುಂಡರಿಸಿಕೊಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪಿಲಿಕುಳದ ಐದು ಎಕರೆಯಷ್ಟು ವಿಸ್ತಾರವಿರುವ ಈ ಲೇಕ್ ಗಾರ್ಡನ್ ಕೆರೆಗೆ ಮೀನುಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಪ್ರತೀ ವರ್ಷ ಮೀನುಮರಿಗಳನ್ನು ಬಿಡಲಾಗುತ್ತದೆ. ಹಾಗೆಯೇ ವರ್ಷಂಪ್ರತಿ ಜುಲೈ ವೇಳೆಗೆ ಮತ್ಸ್ಯೋತ್ಸವ ನಡೆಸಲಾಗುತ್ತದೆ. ಈ ಬಾರಿ 2 ಟನ್ಗಳಷ್ಟು ಮೀನುಗಳು ಸಿಕ್ಕಿದೆ. ಜೊತೆಗೆ ಮೀನುಪ್ರಿಯರಿಗೆ ಅಲ್ಲೇ ಮೀನಿನ ಖಾದ್ಯವನ್ನು ತಯಾರಿಸುವ ವ್ಯವಸ್ಥೆಯನ್ನೂ ಮೀನುಗಾರಿಕೆ ಇಲಾಖೆ ಮಾಡಿತ್ತು. ಒಟ್ಟಿನಲ್ಲಿ ಮಳೆಗಾಲದಲ್ಲಿ ಪಿಲಿಕುಳದಲ್ಲಿ ನಡೆದ ಮತ್ಸ್ಯೋತ್ಸವಕ್ಕೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಯಿತು.
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…
ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…