Advertisement
MIRROR FOCUS

ಮಂಗಳೂರು ಮತ್ಸ್ಯೋತ್ಸವ | ಇಲ್ಲಿ ಸಮುದ್ರ ಮೀನಗಿಂತ ಕೆರೆ ಮೀನಿಗೆ ಡಿಮ್ಯಾಂಡ್‌ | ಕೆರೆ ಮೀನಿಗಾಗಿ ಮುಗಿಬಿದ್ದ ಮತ್ಸ್ಯಪ್ರಿಯರು

Share

ಇತ್ತೀಚಿನ ದಿನಗಳಲ್ಲಿ ಸಮುದ್ರ ಮೀನು(sea Fish) ಬೆಲೆ ಗಗನಕ್ಕೇರಿದ(Price hike) ಹಿನ್ನೆಲೆ ಮತ್ಸ್ಯ ಪ್ರಿಯರು ಕೆರೆ ಮೀನುಗಳ(Lake Fish) ಮೊರೆ ಹೋಗುತ್ತಿದ್ದಾರೆ. ಹಾಗೆ ಮೀನು ಸಾಕಾಣಿಕೆ ಕೂಡ ಉದ್ಯಮವಾಗಿ(Business) ಬೆಳೆಯುತ್ತಿದೆ. ಅನೇಕ ರೈತರು ಮೀನು ಸಾಕಾಣಿಕೆಯನ್ನು(Fishery) ಉಪ ಕಸುಬನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಹೆಚ್ಚಿನ ಕಡೆಗಳನ್ನು ಕೆರೆ ಮೀನು ಮಾರಾಟ ನಡೆಯುತ್ತದೆ. ಅಲ್ಲದೆ ಸಮುದ್ರ ಮೀನುಗಾರಿಕೆಗೆ ಜೂನ್‌ ಹಾಗೂ ಜುಲೈ ತಿಂಗಳಿನಲ್ಲಿ ಬಿಡುವ ನೀಡುವ ಕಾರಣ ತಾಜಾ ಮೀನು ಸಿಗುವುದಿಲ್ಲ. ಹಾಗಾಗಿ ಹೆಚ್ಚಿನ ಜನತೆ ಕೆರೆ ಮೀನು ಕಡೆ ಒಲವು ತೋರುತ್ತಾರೆ. ಅದರಲ್ಲೂ ಜೀವಂತವಿರುವ  ಮೀನುಗಳಿಗೆ ಸ್ವಲ್ಪ ಹೆಚ್ಚೇ ಡಿಮ್ಯಾಂಡ್‌ . ಮಳೆಗಾಲದಲ್ಲಿ ಹೀಗೆ ತಾಜಾ ಮೀನುಗಳು (Fresh Fish) ಸಿಗೋದೆ ಖುಷಿ. ಮಂಗಳೂರಿನ ಸರಕಾರಿ ಪ್ರಾಯೋಜಿತ ಮೀನು ಮಾರಾಟ ಉತ್ಸವದಲ್ಲಿ ತಾಜಾ ಮೀನುಗಳ ಭರ್ಜರಿ ಮಾರಾಟ ನಡೆಯಿತು. 

ಮತ್ಸ್ಯ ಬೇಟೆ : ಮಂಗಳೂರಿನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಮೀನುಗಾರಿಕಾ ಇಲಾಖೆಯ ಜಂಟಿ ಆಶ್ರಯದಲ್ಲಿ ಪಿಲಿಕುಳದ ಲೇಕ್ ಗಾರ್ಡನ್ ಕೆರೆಯಲ್ಲಿ ಮತ್ಸ್ಯಬೇಟೆ ನಡೆಯಿತು. ಹಿಡಿದ ತಾಜಾ ಮೀನುಗಳನ್ನು ಅಲ್ಲಿಯೇ ಮಾರಾಟ ಮಾಡಲಾಯಿತು. ರೋಹ್, ಕಾಟ್ಲ, ತಿಲೇಪಿಯಾ, ಮುಗುಡು ಹಾಗೂ ಗೌರಿ ಮೀನುಗಳು ಇಲ್ಲಿ ಲಭ್ಯವಿತ್ತು. ಕೆಜಿಗೆ 150ರೂಪಾಯಿನಂತೆ ಮೀನುಗಳ ಮಾರಾಟವಾದವು. ಖರೀದಿಸಿರುವ ಮೀನುಗಳನ್ನು ತುಂಡರಿಸಿಕೊಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪಿಲಿಕುಳದ ಐದು ಎಕರೆಯಷ್ಟು ವಿಸ್ತಾರವಿರುವ ಈ ಲೇಕ್ ಗಾರ್ಡನ್ ಕೆರೆಗೆ ಮೀನುಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಪ್ರತೀ ವರ್ಷ ಮೀನುಮರಿಗಳನ್ನು ಬಿಡಲಾಗುತ್ತದೆ. ಹಾಗೆಯೇ ವರ್ಷಂಪ್ರತಿ ಜುಲೈ ವೇಳೆಗೆ ಮತ್ಸ್ಯೋತ್ಸವ ನಡೆಸಲಾಗುತ್ತದೆ. ಈ ಬಾರಿ 2 ಟನ್‌ಗಳಷ್ಟು ಮೀನುಗಳು ಸಿಕ್ಕಿದೆ. ಜೊತೆಗೆ ಮೀನುಪ್ರಿಯರಿಗೆ ಅಲ್ಲೇ ಮೀನಿನ ಖಾದ್ಯವನ್ನು ತಯಾರಿಸುವ ವ್ಯವಸ್ಥೆಯನ್ನೂ ಮೀನುಗಾರಿಕೆ ಇಲಾಖೆ ಮಾಡಿತ್ತು. ಒಟ್ಟಿನಲ್ಲಿ ಮಳೆಗಾಲದಲ್ಲಿ ಪಿಲಿಕುಳದಲ್ಲಿ ನಡೆದ ಮತ್ಸ್ಯೋತ್ಸವಕ್ಕೆ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಯಿತು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

6 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

7 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

9 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

9 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

20 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago